‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನನ್ನ ಆತ್ಮೀಯ ಸ್ನೇಹಿತರು. ಮೂರು ದಿನಗಳ ಹಿಂದೆ ಅವರು ಶಿವಮೊಗ್ಗಕ್ಕೆ ಬಂದಾಗ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೆನು. ಬಿಜೆಪಿಯಲ್ಲಿ ನಾನು ಹಿರಿಯ ಅಲ್ಲ ಎಂದರೆ ತಪ್ಪಾಗುತ್ತದೆ. ಪಕ್ಷ ನನಗೆ ಶಾಸಕ, ಉಪಮುಖ್ಯಮಂತ್ರಿ ಸ್ಥಾನದವರೆಗೂ ಅವಕಾಶ ನೀಡಿದೆ. ನಾನು ಬಲಿಪಶು ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.