<p><strong>ಶಿವಮೊಗ್ಗ</strong>: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭೌತ ವಿಜ್ಞಾನಿ ಮುಂಬೈನ ಪ್ರೊ.ಸಿ.ಎಸ್.ಉನ್ನಿಕೃಷ್ಣನ್ ಹಾಗೂ ಯೋಗಗುರು ಭದ್ರಾವತಿಯ ಡಿ.ನಾಗರಾಜ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.</p><p>ಇದೇ ವೇಳೆ ರಾಜ್ಯಪಾಲರು 98 ಮಂದಿ ರ್ಯಾಂಕ್ ವಿಜೇತರಿಗೆ 146 ಚಿನ್ನದ ಪದಕ ಹಾಗೂ 17 ನಗದು ಬಹುಮಾನ ವಿತರಿಸಿದರು.</p><p>ಘಟಿಕೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪೂರ್ಣಗೊಳಿಸಿದ 18,885 ವಿದ್ಯಾರ್ಥಿಗಳು ಪದವಿ ಪಡೆದರು.</p><p>ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಘಟಿಕೋತ್ಸವ ಭಾಷಣ ಮಾಡಿದರು.</p><p>ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭೌತ ವಿಜ್ಞಾನಿ ಮುಂಬೈನ ಪ್ರೊ.ಸಿ.ಎಸ್.ಉನ್ನಿಕೃಷ್ಣನ್ ಹಾಗೂ ಯೋಗಗುರು ಭದ್ರಾವತಿಯ ಡಿ.ನಾಗರಾಜ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.</p><p>ಇದೇ ವೇಳೆ ರಾಜ್ಯಪಾಲರು 98 ಮಂದಿ ರ್ಯಾಂಕ್ ವಿಜೇತರಿಗೆ 146 ಚಿನ್ನದ ಪದಕ ಹಾಗೂ 17 ನಗದು ಬಹುಮಾನ ವಿತರಿಸಿದರು.</p><p>ಘಟಿಕೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪೂರ್ಣಗೊಳಿಸಿದ 18,885 ವಿದ್ಯಾರ್ಥಿಗಳು ಪದವಿ ಪಡೆದರು.</p><p>ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಘಟಿಕೋತ್ಸವ ಭಾಷಣ ಮಾಡಿದರು.</p><p>ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>