ಕಾಗೋಡು ತಿಮ್ಮಪ್ಪ ಮಾತನಾಡಿ, ‘ಸಾಮಾಜಿಕ ಸಮಾನತೆಯ ಸಿದ್ಧಾಂತವನ್ನು ಬಿಜೆಪಿ ತನ್ನ ಅಧಿಕಾರವನ್ನು ಬಳಸಿ ಸಂಪೂರ್ಣವಾಗಿ ಮೂಲೆಗುಂಪು ಮಾಡುತ್ತಿದೆ. ಬಡವರಿಗೆ ಭೂಮಿಯ ಹಕ್ಕು ಕೊಡಿಸುವ ವಿಚಾರದಲ್ಲಿ ಆ ಪಕ್ಷಕ್ಕೆ ಯಾವುದೇ ಆಸಕ್ತಿ ಇಲ್ಲ. ಅರಣ್ಯ ಭೂಮಿ ಹಕ್ಕು ಕಾಯ್ದೆ ಅನುಷ್ಠಾನಕ್ಕೂ ಬಿಜೆಪಿ ಮುಖಂಡರು ಮುಂದಾಗುತ್ತಿಲ್ಲ. ಈ ತಪ್ಪಿಗೆ ಅವರು ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಗುಡುಗಿದರು.