<p><strong>ಸಾಗರ: </strong>ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಇಲ್ಲಿನ ದೇವರಾಜ ಅರಸು ಸಭಾಭವನಕ್ಕೆ ಮಂಗಳವಾರ ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಸಂಗ್ರಹವಿಲ್ಲದ ಕಾರಣ ಮನೆಗೆ ಮರಳಬೇಕಾಯಿತು.</p>.<p>ಕಾಗೋಡು ತಿಮ್ಮಪ್ಪ ಅವರಿಗೆ ಎರಡನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಮಂಗಳವಾರ ಬರುವಂತೆ ಅವರ ಮೊಬೈಲ್ಗೆ ಸಂದೇಶ ಕಳುಹಿಸಲಾಗಿತ್ತು. ಆ ಪ್ರಕಾರ ಅವರು ಲಸಿಕಾ ಕೇಂದ್ರಕ್ಕೆ ಬಂದರೆ ‘ಲಸಿಕೆ ಸಂಗ್ರಹವಿಲ್ಲ’ ಎಂಬ ಫಲಕ ನೋಡಿ ವಾಪಸ್ ಹೋಗಬೇಕಾಯಿತು.</p>.<p>ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲರಿಗೂ ಉಚಿತವಾಗಿ ಕೋವಿಡ್ ತಡೆ ಲಸಿಕೆ ಹಾಕುವುದಾಗಿ ವ್ಯಾಪಕ ಪ್ರಚಾರ ನೀಡಿದೆ. ಆದರೆ, ಅಗತ್ಯ ಪ್ರಮಾಣದಲ್ಲಿ ಲಸಿಕಾ ಕೇಂದ್ರಗಳಿಗೆ ಲಸಿಕೆ ಸರಬರಾಜು ಆಗದೆ ಇರುವುದು ದುರದೃಷ್ಟಕರ’ ಎಂದರು.</p>.<p>‘ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ಗ್ರಾಮೀಣ ಭಾಗದ ಜನರಿಗೂ ಲಸಿಕೆ ಕೊರತೆ ಸಮಸ್ಯೆ ಕಾಡುತ್ತಿದೆ. ಲಸಿಕಾ ಕೇಂದ್ರಗಳಿಗೆ ಸುರಿಯುವ ಮಳೆಯಲ್ಲಿ ಬರುವ ಜನರು ಲಸಿಕೆ ಸಿಗದೆ ನಿರಾಶರಾಗಿ ಮರಳುತ್ತಿದ್ದಾರೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಹೇಳಿದರು.</p>.<p>‘ಲಸಿಕೆ ಸರಬರಾಜಿನಲ್ಲಿ ಕೊರತೆ ಇರುವುದು ನಿಜ. ಸರ್ಕಾರ ತುರ್ತಾಗಿ ಲಸಿಕೆ ಸರಬರಾಜು ಮಾಡದೆ ಇದ್ದರೆ ಅಗತ್ಯವಿರುವ ಎಲ್ಲರಿಗೂ ಲಸಿಕೆ ನೀಡುವುದು ಸಾಧ್ಯವಿಲ್ಲ. 18ರಿಂದ 45 ವರ್ಷದೊಳಗಿನವರಿಗೆ ಲಸಿಕೆ ನೀಡುವ ಸಂಬಂಧ ಇನ್ನೂ ಸರ್ಕಾರದ ಆದೇಶ ಬಂದಿಲ್ಲ’ ಎಂದು ಲಸಿಕಾ ಕೇಂದ್ರದ ಸಂಯೋಜಕ ಮ.ಸ.ನಂಜುಂಡಸ್ವಾಮಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಇಲ್ಲಿನ ದೇವರಾಜ ಅರಸು ಸಭಾಭವನಕ್ಕೆ ಮಂಗಳವಾರ ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಸಂಗ್ರಹವಿಲ್ಲದ ಕಾರಣ ಮನೆಗೆ ಮರಳಬೇಕಾಯಿತು.</p>.<p>ಕಾಗೋಡು ತಿಮ್ಮಪ್ಪ ಅವರಿಗೆ ಎರಡನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಮಂಗಳವಾರ ಬರುವಂತೆ ಅವರ ಮೊಬೈಲ್ಗೆ ಸಂದೇಶ ಕಳುಹಿಸಲಾಗಿತ್ತು. ಆ ಪ್ರಕಾರ ಅವರು ಲಸಿಕಾ ಕೇಂದ್ರಕ್ಕೆ ಬಂದರೆ ‘ಲಸಿಕೆ ಸಂಗ್ರಹವಿಲ್ಲ’ ಎಂಬ ಫಲಕ ನೋಡಿ ವಾಪಸ್ ಹೋಗಬೇಕಾಯಿತು.</p>.<p>ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲರಿಗೂ ಉಚಿತವಾಗಿ ಕೋವಿಡ್ ತಡೆ ಲಸಿಕೆ ಹಾಕುವುದಾಗಿ ವ್ಯಾಪಕ ಪ್ರಚಾರ ನೀಡಿದೆ. ಆದರೆ, ಅಗತ್ಯ ಪ್ರಮಾಣದಲ್ಲಿ ಲಸಿಕಾ ಕೇಂದ್ರಗಳಿಗೆ ಲಸಿಕೆ ಸರಬರಾಜು ಆಗದೆ ಇರುವುದು ದುರದೃಷ್ಟಕರ’ ಎಂದರು.</p>.<p>‘ನಗರ ಪ್ರದೇಶಗಳಲ್ಲಿ ಮಾತ್ರವಲ್ಲ, ಗ್ರಾಮೀಣ ಭಾಗದ ಜನರಿಗೂ ಲಸಿಕೆ ಕೊರತೆ ಸಮಸ್ಯೆ ಕಾಡುತ್ತಿದೆ. ಲಸಿಕಾ ಕೇಂದ್ರಗಳಿಗೆ ಸುರಿಯುವ ಮಳೆಯಲ್ಲಿ ಬರುವ ಜನರು ಲಸಿಕೆ ಸಿಗದೆ ನಿರಾಶರಾಗಿ ಮರಳುತ್ತಿದ್ದಾರೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಹೇಳಿದರು.</p>.<p>‘ಲಸಿಕೆ ಸರಬರಾಜಿನಲ್ಲಿ ಕೊರತೆ ಇರುವುದು ನಿಜ. ಸರ್ಕಾರ ತುರ್ತಾಗಿ ಲಸಿಕೆ ಸರಬರಾಜು ಮಾಡದೆ ಇದ್ದರೆ ಅಗತ್ಯವಿರುವ ಎಲ್ಲರಿಗೂ ಲಸಿಕೆ ನೀಡುವುದು ಸಾಧ್ಯವಿಲ್ಲ. 18ರಿಂದ 45 ವರ್ಷದೊಳಗಿನವರಿಗೆ ಲಸಿಕೆ ನೀಡುವ ಸಂಬಂಧ ಇನ್ನೂ ಸರ್ಕಾರದ ಆದೇಶ ಬಂದಿಲ್ಲ’ ಎಂದು ಲಸಿಕಾ ಕೇಂದ್ರದ ಸಂಯೋಜಕ ಮ.ಸ.ನಂಜುಂಡಸ್ವಾಮಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>