<p><strong>ಶಿವಮೊಗ್ಗ</strong>: ವ್ಯಂಗ್ಯ ಚಿತ್ರಕಾರ, ಶಿಕ್ಷಕ ಗಂಗಾಧರ್ ಅಡ್ಡೇರಿ (43) ಸೋಮವಾರ ನಿಧನರಾದರು.</p>.<p>ವಾರದ ಹಿಂದೆ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ರಾತ್ರಿ ಆಮ್ಲಜನಕದಮಟ್ಟ ಕಡಿಮೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ವೆಂಟಿಲೇಟರ್ ವ್ಯವಸ್ಥೆ ಮಾಡುವಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.</p>.<p>ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪದ ಅಡ್ಡೇರಿಯ ಗಂಗಾಧರ್ ಬೆಂಗಳೂರು ಹೊಸಕೋಟೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಲಾಕ್ಡೌನ್ ಘೋಷಣೆ ಸಮಯದಲ್ಲಿ ಊರಿಗೆ ಬಂದಿದ್ದರು. ಬಂದ ಕೆಲವು ದಿನಗಳಲ್ಲೇ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.</p>.<p>ರಾಜ್ಯಮಟ್ಟದ ಹಲವು ಪತ್ರಿಕೆಗಳಲ್ಲಿ ಅವರ ವ್ಯಂಗ್ಯ ಚಿತ್ರಗಳು ಪ್ರಕಟವಾಗಿವೆ. ಹಲವು ಪ್ರಶಸ್ತಿಗಳಿಗೂ ಪುರಸ್ಕೃತರಾಗಿದ್ದರು.</p>.<p>ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.</p>.<p><strong>ನಾಲ್ಕು ದಿನಗಳ ಮೊದಲು ಅಪ್ಪ ಸಾವು:</strong> ಅರಣ್ಯ ಇಲಾಖೆ ನಿವೃತ್ತ ನೌಕರರಾಗಿದ್ದ ಅವರ ತಂದೆ ಈಶ್ವರಪ್ಪ ಮೇ14ರಂದು ಕೋವಿಡ್ನಿಂದ ಮೆಗ್ಗಾನ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಅವರ ಸಾವಿನ ಸುದ್ದಿ ತಿಳಿಸುವ ಮೊದಲೇ ಪುತ್ರನೂ ಇಹಲೋಕ ತ್ಯಜಿಸಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/health-minister-k-sudhakar-says-state-government-provide-free-treatment-for-black-fungus-patients-831419.html" target="_blank">ಕಪ್ಪು ಶಿಲೀಂಧ್ರ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ವ್ಯಂಗ್ಯ ಚಿತ್ರಕಾರ, ಶಿಕ್ಷಕ ಗಂಗಾಧರ್ ಅಡ್ಡೇರಿ (43) ಸೋಮವಾರ ನಿಧನರಾದರು.</p>.<p>ವಾರದ ಹಿಂದೆ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ರಾತ್ರಿ ಆಮ್ಲಜನಕದಮಟ್ಟ ಕಡಿಮೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ವೆಂಟಿಲೇಟರ್ ವ್ಯವಸ್ಥೆ ಮಾಡುವಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.</p>.<p>ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪದ ಅಡ್ಡೇರಿಯ ಗಂಗಾಧರ್ ಬೆಂಗಳೂರು ಹೊಸಕೋಟೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಲಾಕ್ಡೌನ್ ಘೋಷಣೆ ಸಮಯದಲ್ಲಿ ಊರಿಗೆ ಬಂದಿದ್ದರು. ಬಂದ ಕೆಲವು ದಿನಗಳಲ್ಲೇ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.</p>.<p>ರಾಜ್ಯಮಟ್ಟದ ಹಲವು ಪತ್ರಿಕೆಗಳಲ್ಲಿ ಅವರ ವ್ಯಂಗ್ಯ ಚಿತ್ರಗಳು ಪ್ರಕಟವಾಗಿವೆ. ಹಲವು ಪ್ರಶಸ್ತಿಗಳಿಗೂ ಪುರಸ್ಕೃತರಾಗಿದ್ದರು.</p>.<p>ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.</p>.<p><strong>ನಾಲ್ಕು ದಿನಗಳ ಮೊದಲು ಅಪ್ಪ ಸಾವು:</strong> ಅರಣ್ಯ ಇಲಾಖೆ ನಿವೃತ್ತ ನೌಕರರಾಗಿದ್ದ ಅವರ ತಂದೆ ಈಶ್ವರಪ್ಪ ಮೇ14ರಂದು ಕೋವಿಡ್ನಿಂದ ಮೆಗ್ಗಾನ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಅವರ ಸಾವಿನ ಸುದ್ದಿ ತಿಳಿಸುವ ಮೊದಲೇ ಪುತ್ರನೂ ಇಹಲೋಕ ತ್ಯಜಿಸಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/health-minister-k-sudhakar-says-state-government-provide-free-treatment-for-black-fungus-patients-831419.html" target="_blank">ಕಪ್ಪು ಶಿಲೀಂಧ್ರ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>