<p><strong>ಶಿವಮೊಗ್ಗ</strong>: ‘ಕರ್ನಾಟಕ ರಾಜ್ಯೋತ್ಸವ ಕೇವಲ ಘೋಷಣೆ- ಭಾಷಣಗಳಿಗೆ ಸೀಮಿತಗೊಳ್ಳದೇ ಕನ್ನಡದ ಅಸ್ಮಿತೆಯ ಜಾಗೃತಿಗೆ ವೇದಿಕೆಯಾಗಬೇಕು. ಯಾವುದೇ ಜಾತಿ ಮತ, ಭಾಷೆ-ಬಣ್ಣಗಳ ಹಂಗಿಲ್ಲದೆ ಕನ್ನಡತನವನ್ನು ಸಂಭ್ರಮಿಸುವ ಹಬ್ಬ ಇದಾಗಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಭ್ರಮದ ಈ ದಿನ ನಾವೆಲ್ಲರೂ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಾಗಿದೆ ಎಂದರು.</p>.<p>‘ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ತನ್ನದೇ ವಿಶಿಷ್ಟತೆ ಹೊಂದಿದೆ. ಹಲವಾರು ಜನಪರ ಚಳವಳಿಗಳ ಹುಟ್ಟು ಹಾಕಿದ ಈ ನೆಲ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾಗಿದೆ’ ಎಂದರು.</p>.<p>ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು. ಶಿವಶರಣೆ ಅಕ್ಕಮಹಾದೇವಿ ಉಡುತಡಿಯವರು. ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಅವರಂತಹ ರಾಷ್ಟ್ರಕವಿಗಳನ್ನು ಕೊಟ್ಟ ಹಿರಿಮೆ ಅಷ್ಟೇ ಅಲ್ಲ ಕುವೆಂಪು ಮತ್ತು ಯು.ಆರ್. ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು, ಮೂರು ಜನ ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದ ಹಿರಿಮೆ ಶಿವಮೊಗ್ಗ ಜಿಲ್ಲೆಯದ್ದು ಎಂದು ಸ್ಮರಿಸಿದರು.<br /><br />ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ನಮ್ಮ ನಾಡು ಎಲ್ಲಾ ಜಾತಿ ಧರ್ಮಗಳ ಜನರು ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು ಎಂದು ಆಶಿಸಿದರು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ನಗರದ ಸೈನ್ಸ್ ಮೈದಾನದಿಂದ ನೆಹರೂ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ. ಮಿಥುನ್ಕುಮಾರ್, ಭಾರತ ಸೇವಾದಳದ ವೈ.ಎಚ್.ನಾಗರಾಜ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಕರ್ನಾಟಕ ರಾಜ್ಯೋತ್ಸವ ಕೇವಲ ಘೋಷಣೆ- ಭಾಷಣಗಳಿಗೆ ಸೀಮಿತಗೊಳ್ಳದೇ ಕನ್ನಡದ ಅಸ್ಮಿತೆಯ ಜಾಗೃತಿಗೆ ವೇದಿಕೆಯಾಗಬೇಕು. ಯಾವುದೇ ಜಾತಿ ಮತ, ಭಾಷೆ-ಬಣ್ಣಗಳ ಹಂಗಿಲ್ಲದೆ ಕನ್ನಡತನವನ್ನು ಸಂಭ್ರಮಿಸುವ ಹಬ್ಬ ಇದಾಗಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.</p>.<p>ಇಲ್ಲಿನ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಭ್ರಮದ ಈ ದಿನ ನಾವೆಲ್ಲರೂ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಾಗಿದೆ ಎಂದರು.</p>.<p>‘ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ತನ್ನದೇ ವಿಶಿಷ್ಟತೆ ಹೊಂದಿದೆ. ಹಲವಾರು ಜನಪರ ಚಳವಳಿಗಳ ಹುಟ್ಟು ಹಾಕಿದ ಈ ನೆಲ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶ್ರೀಮಂತವಾಗಿದೆ’ ಎಂದರು.</p>.<p>ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು. ಶಿವಶರಣೆ ಅಕ್ಕಮಹಾದೇವಿ ಉಡುತಡಿಯವರು. ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಅವರಂತಹ ರಾಷ್ಟ್ರಕವಿಗಳನ್ನು ಕೊಟ್ಟ ಹಿರಿಮೆ ಅಷ್ಟೇ ಅಲ್ಲ ಕುವೆಂಪು ಮತ್ತು ಯು.ಆರ್. ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು, ಮೂರು ಜನ ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದ ಹಿರಿಮೆ ಶಿವಮೊಗ್ಗ ಜಿಲ್ಲೆಯದ್ದು ಎಂದು ಸ್ಮರಿಸಿದರು.<br /><br />ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ನಮ್ಮ ನಾಡು ಎಲ್ಲಾ ಜಾತಿ ಧರ್ಮಗಳ ಜನರು ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು ಎಂದು ಆಶಿಸಿದರು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ನಗರದ ಸೈನ್ಸ್ ಮೈದಾನದಿಂದ ನೆಹರೂ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ. ಮಿಥುನ್ಕುಮಾರ್, ಭಾರತ ಸೇವಾದಳದ ವೈ.ಎಚ್.ನಾಗರಾಜ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>