<p><strong>ಭದ್ರಾವತಿ</strong>: ಬೆಂಗಳೂರಿನಂತಹ ಮಹಾನಗರಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಹಳ್ಳಿಗಳಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಾಲೂಕಿನ ಯರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.</p>.<p>ಈಚೆಗೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿದರು.</p>.<p>ಮಹಾನಗರಗಳಲ್ಲಿ ಇಂಗ್ಲಿಷ್ ಮತ್ತು ಇತರೆ ಭಾಷೆಗಳ ಮೇಲಿನ ವ್ಯಾಮೋಹ ಅತಿಯಾಗುತ್ತಿದ್ದು, ಕನ್ನಡ ಮಾತನಾಡುವವರನ್ನು ಕೀಳಾಗಿ ಕಾಣುವ ಸಂಸ್ಕೃತಿ ಬೆಳೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಶುದ್ಧ ಓದು, ಬರಹ ರೂಢಿಸಿಕೊಂಡು ಕನ್ನಡ ಉಳಿಸಿ ಬೆಳೆಸಿ ಎಂದು ತಿಳಿಸಿದರು.</p>.<p>ಮುಖ್ಯ ಶಿಕ್ಷಕ ಮೈಲಾರಪ್ಪ, ಶಿಕ್ಷಕಿಯರಾದ ದೇವಕರಣಮ್ಮ, ಶೋಭಾ, ಲಿಂಗಮೂರ್ತಿ, ಕನ್ನಡ ಯುವಕ ಸಂಘದ ಪದಾಧಿಕಾರಿಗಳು, ಪ್ರಮುಖರಾದ ಅಶೋಕ್, ದಿವಾಕರ್, ಆನಂದ್, ಸೋಮಶೇಖರ್ ಮತ್ತು ವೆಂಕಟೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಬೆಂಗಳೂರಿನಂತಹ ಮಹಾನಗರಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಹಳ್ಳಿಗಳಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಾಲೂಕಿನ ಯರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.</p>.<p>ಈಚೆಗೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿದರು.</p>.<p>ಮಹಾನಗರಗಳಲ್ಲಿ ಇಂಗ್ಲಿಷ್ ಮತ್ತು ಇತರೆ ಭಾಷೆಗಳ ಮೇಲಿನ ವ್ಯಾಮೋಹ ಅತಿಯಾಗುತ್ತಿದ್ದು, ಕನ್ನಡ ಮಾತನಾಡುವವರನ್ನು ಕೀಳಾಗಿ ಕಾಣುವ ಸಂಸ್ಕೃತಿ ಬೆಳೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.</p>.<p>ಶುದ್ಧ ಓದು, ಬರಹ ರೂಢಿಸಿಕೊಂಡು ಕನ್ನಡ ಉಳಿಸಿ ಬೆಳೆಸಿ ಎಂದು ತಿಳಿಸಿದರು.</p>.<p>ಮುಖ್ಯ ಶಿಕ್ಷಕ ಮೈಲಾರಪ್ಪ, ಶಿಕ್ಷಕಿಯರಾದ ದೇವಕರಣಮ್ಮ, ಶೋಭಾ, ಲಿಂಗಮೂರ್ತಿ, ಕನ್ನಡ ಯುವಕ ಸಂಘದ ಪದಾಧಿಕಾರಿಗಳು, ಪ್ರಮುಖರಾದ ಅಶೋಕ್, ದಿವಾಕರ್, ಆನಂದ್, ಸೋಮಶೇಖರ್ ಮತ್ತು ವೆಂಕಟೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>