ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ನಾತಕ ಹಾಗೂ ಸ್ನಾತಕೋತ್ತರ ಹಂತಗಳಲ್ಲಿಸಿಬಿಎಸ್ಸಿ(ಆಯ್ಕೆ ಆಧಾರಿತ ಗಳಿಕೆ ಪದ್ಧತಿ) ಅಳವಡಿಸಿಕೊಳ್ಳಲು ಆದೇಶಿಸಿದೆ. ಪ್ರಕ್ರಿಯೆಯೂ ಆರಂಭವಾಗಿದೆ. ಈ ಹೊಸ ಶಿಕ್ಷಣ ಪದ್ಧತಿ ಅಳವಡಿಸಿಕೊಂಡಲ್ಲಿ ಪದವಿ ಹಂತದಲ್ಲಿ ಕನ್ನಡ ಕಲಿಕೆ, ಅಧ್ಯಯನಕ್ಕೆ ತೊಂದರೆಯಾಗುತ್ತದೆ ಎಂದುವೇದಿಕೆಯ ಅಧ್ಯಕ್ಷ ಎಚ್.ಟಿ.ಕೃಷ್ಣಮೂರ್ತಿ, ಕಾರ್ಯದರ್ಶಿ ಡಾ.ಪ್ರಕಾಶ್ ದೂರಿದ್ದಾರೆ.