<p>ಸಾಗರ: ‘ಈ ನೆಲದ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮ ನಡೆಸುವ ಐಟಿ, ಬಿಟಿ ಸೇರಿದಂತೆ ವಿವಿಧ ಖಾಸಗಿ ಕಂಪೆನಿಗಳು ಶೇ 90ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು.</p>.<p>ರಾಜ್ಯೋತ್ಸವದ ಅಂಗವಾಗಿ ಬುಧವಾರ ತಾಲ್ಲೂಕು ಆಡಳಿತ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಕಂಪೆನಿಗಳು ಇಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು ಹೊರ ರಾಜ್ಯದವರಿಗೆ ಹೆಚ್ಚಿನ ಪ್ರಮಾಣದ ಉದ್ಯೋಗ ನೀಡುವ ಕ್ರಮ ಸರಿಯಲ್ಲ. ಈ ವಿಷಯದಲ್ಲಿ ಕಾನೂನಿಗೆ ಅಗತ್ಯ ತಿದ್ದುಪಡಿ ತರಬೇಕಿದೆ’ ಎಂದು ಪ್ರತಿಪಾದಿಸಿದರು.</p>.<p>‘ಕನ್ನಡ ನೆಲ, ಜಲ, ಸಂಸ್ಕೃತಿಗೆ ಧಕ್ಕೆಯಾದಾಗ ಪ್ರಾದೇಶಿಕ ಭಿನ್ನತೆ, ಜಾತಿ, ಧರ್ಮಗಳ ಹಿನ್ನೆಲೆಯನ್ನು ಕಡೆಗಣಿಸಿ ನಾವೆಲ್ಲರೂ ಕನ್ನಡಿಗರು ಎಂಬ ಭಾವನೆಯಿಂದ ಒಟ್ಟಾಗಿ ಧ್ವನಿ ಎತ್ತುವ ಅಗತ್ಯವಿದೆ. ಆಗ ಮಾತ್ರ ಬಲಿಷ್ಠ ಕರ್ನಾಟಕ ನಿರ್ಮಾಣ ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪ ವಿಭಾಗಾಧಿಕಾರಿ ಪಲ್ಲವಿ ಸಾತನೇಹಳ್ಳಿ, ‘ನಿತ್ಯದ ಬಳಕೆಯಲ್ಲಿ ವ್ಯಾಪಕವಾಗಿರುವ ಭಾಷೆ ಯಾವತ್ತೂ ಜನಮಾನಸದಲ್ಲಿ ನೆಲೆಸಿರುತ್ತದೆ ಎಂಬುದಕ್ಕೆ ಕನ್ನಡ ಭಾಷೆಯೇ ಸಾಕ್ಷಿಯಾಗಿದೆ’ ಎಂದರು.</p>.<p>ಇತಿಹಾಸ ಪ್ರಸಿದ್ಧ ಕೆಳದಿ ರಾಮೇಶ್ವರ ದೇವಸ್ಥಾನದಿಂದ ತರಲಾದ ವಿದ್ಯಾರಣ್ಯ ಜ್ಯೋತಿಯನ್ನು ನಗರದ ರಾಣಿಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಸ್ತಬ್ಧ ಚಿತ್ರಗಳೊಂದಿಗೆ ವಿದ್ಯಾರಣ್ಯ ಜ್ಯೋತಿಯ ಮೆರವಣಿಗೆ ನಡೆಯಿತು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾಗೇಶ್ ಬ್ಯಾಲಾಳ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ, ವಿವಿಧ ಸಂಘಟನೆಗಳ ಪ್ರಮುಖರು, ನಗರಸಭೆ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಈ ನೆಲದ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮ ನಡೆಸುವ ಐಟಿ, ಬಿಟಿ ಸೇರಿದಂತೆ ವಿವಿಧ ಖಾಸಗಿ ಕಂಪೆನಿಗಳು ಶೇ 90ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು.</p>.<p>ರಾಜ್ಯೋತ್ಸವದ ಅಂಗವಾಗಿ ಬುಧವಾರ ತಾಲ್ಲೂಕು ಆಡಳಿತ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಕಂಪೆನಿಗಳು ಇಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು ಹೊರ ರಾಜ್ಯದವರಿಗೆ ಹೆಚ್ಚಿನ ಪ್ರಮಾಣದ ಉದ್ಯೋಗ ನೀಡುವ ಕ್ರಮ ಸರಿಯಲ್ಲ. ಈ ವಿಷಯದಲ್ಲಿ ಕಾನೂನಿಗೆ ಅಗತ್ಯ ತಿದ್ದುಪಡಿ ತರಬೇಕಿದೆ’ ಎಂದು ಪ್ರತಿಪಾದಿಸಿದರು.</p>.<p>‘ಕನ್ನಡ ನೆಲ, ಜಲ, ಸಂಸ್ಕೃತಿಗೆ ಧಕ್ಕೆಯಾದಾಗ ಪ್ರಾದೇಶಿಕ ಭಿನ್ನತೆ, ಜಾತಿ, ಧರ್ಮಗಳ ಹಿನ್ನೆಲೆಯನ್ನು ಕಡೆಗಣಿಸಿ ನಾವೆಲ್ಲರೂ ಕನ್ನಡಿಗರು ಎಂಬ ಭಾವನೆಯಿಂದ ಒಟ್ಟಾಗಿ ಧ್ವನಿ ಎತ್ತುವ ಅಗತ್ಯವಿದೆ. ಆಗ ಮಾತ್ರ ಬಲಿಷ್ಠ ಕರ್ನಾಟಕ ನಿರ್ಮಾಣ ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪ ವಿಭಾಗಾಧಿಕಾರಿ ಪಲ್ಲವಿ ಸಾತನೇಹಳ್ಳಿ, ‘ನಿತ್ಯದ ಬಳಕೆಯಲ್ಲಿ ವ್ಯಾಪಕವಾಗಿರುವ ಭಾಷೆ ಯಾವತ್ತೂ ಜನಮಾನಸದಲ್ಲಿ ನೆಲೆಸಿರುತ್ತದೆ ಎಂಬುದಕ್ಕೆ ಕನ್ನಡ ಭಾಷೆಯೇ ಸಾಕ್ಷಿಯಾಗಿದೆ’ ಎಂದರು.</p>.<p>ಇತಿಹಾಸ ಪ್ರಸಿದ್ಧ ಕೆಳದಿ ರಾಮೇಶ್ವರ ದೇವಸ್ಥಾನದಿಂದ ತರಲಾದ ವಿದ್ಯಾರಣ್ಯ ಜ್ಯೋತಿಯನ್ನು ನಗರದ ರಾಣಿಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಸ್ತಬ್ಧ ಚಿತ್ರಗಳೊಂದಿಗೆ ವಿದ್ಯಾರಣ್ಯ ಜ್ಯೋತಿಯ ಮೆರವಣಿಗೆ ನಡೆಯಿತು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾಗೇಶ್ ಬ್ಯಾಲಾಳ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ, ವಿವಿಧ ಸಂಘಟನೆಗಳ ಪ್ರಮುಖರು, ನಗರಸಭೆ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>