<p>ಶಿವಮೊಗ್ಗ: ಇಲ್ಲಿ ಕನ್ನಡ ಭಾಷೆ ಹೊರತು ಪಡಿಸಿ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.</p>.<p>ಪಾಲಿಕೆ ವ್ಯಾಪ್ತಿಯ ಎಲ್ಲಾ ಅಂಗಡಿ ಮಂಗಟ್ಟುಗಳ ಎದುರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನ್ಯ ಭಾಷೆಯ ನಾಮಫಲಕ ತೆರವುಗೊಳಿಸಬೇಕು. ನಾಮಫಲಕ ಶೇ.60 ರಷ್ಟು ಕನ್ನಡ ಭಾಷೆಯಲ್ಲಿಯೇ ಇರಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನವಿದೆ. ಇಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಲು ಕಾಯಿದೆ ಕೂಡ ಇದೆ. ಇದನ್ನು ಗಾಳಿಗೆ ತೂರಿ ಆಂಗ್ಲ ಹಾಗೂ ಬೇರೆ ಭಾಷೆಯ ನಾಮಫಲಕಗಳನ್ನು ಬಹಿರಂಗವಾಗಿ ತೂಗು ಹಾಕಲಾಗಿದೆ. ಇದರ ಅರಿವಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ದೂರಿದರು.</p>.<p>ಹೊರಗಿನಿಂದ ಬಂದವರಿಗೆ ನಮ್ಮ ನೆಲ ಬೇಕು, ನಮ್ಮ ನೀರು ಬೇಕು. ನಮ್ಮ ಭಾಷೆ ಬೇಡವೇ? ಇಲ್ಲಿ ಬದುಕುತ್ತಿರುವವರು ಹಾಗೂ ವ್ಯಾಪಾರ–ವಹಿವಾಟು ನಡೆಸುತ್ತಿರುವವರು ಕನ್ನಡ ಭಾಷೆಯಲ್ಲಿಯೇ ವ್ಯವಹಾರಿಸಬೇಕು. ಕನ್ನಡ ಕಡ್ಡಾಯವಾಗಿ ಕಲಿಯಬೇಕು ಎಂದು ಆಗ್ರಹಿಸಿದರು.</p>.<p>ಈ ನಿಯಮ ಜನವರಿ 5 ರೊಳಗೆ ಜಾರಿ ಆಗಬೇಕು. ಇಲ್ಲವಾದರೆ, ಸಂಘಟನೆಯಿಂದಲೇ ತೆರವು ಕಾರ್ಯ ಆಗಲಿದೆ. ಇದು ಮುಂದುವರೆದರೆ ಬೃಹತ್ ಹೋರಾಟ ಕೂಡ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎಸ್.ಕಿರಣ್ಕುಮಾರ್, ನಗರ ಘಟಕ ಅಧ್ಯಕ್ಷ ಎಚ್. ಪ್ರಫುಲ್ಲಾಚಂದ್ರ, ವಿಜಯ್, ರಾಮು, ಸತೀಶ್, ಸಂತೋಷ್,ಕೇಶವ, ಪರಮೇಶ್, ಮೊಹಮ್ಮದ್ ಷಫಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಇಲ್ಲಿ ಕನ್ನಡ ಭಾಷೆ ಹೊರತು ಪಡಿಸಿ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.</p>.<p>ಪಾಲಿಕೆ ವ್ಯಾಪ್ತಿಯ ಎಲ್ಲಾ ಅಂಗಡಿ ಮಂಗಟ್ಟುಗಳ ಎದುರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನ್ಯ ಭಾಷೆಯ ನಾಮಫಲಕ ತೆರವುಗೊಳಿಸಬೇಕು. ನಾಮಫಲಕ ಶೇ.60 ರಷ್ಟು ಕನ್ನಡ ಭಾಷೆಯಲ್ಲಿಯೇ ಇರಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನವಿದೆ. ಇಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಲು ಕಾಯಿದೆ ಕೂಡ ಇದೆ. ಇದನ್ನು ಗಾಳಿಗೆ ತೂರಿ ಆಂಗ್ಲ ಹಾಗೂ ಬೇರೆ ಭಾಷೆಯ ನಾಮಫಲಕಗಳನ್ನು ಬಹಿರಂಗವಾಗಿ ತೂಗು ಹಾಕಲಾಗಿದೆ. ಇದರ ಅರಿವಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ದೂರಿದರು.</p>.<p>ಹೊರಗಿನಿಂದ ಬಂದವರಿಗೆ ನಮ್ಮ ನೆಲ ಬೇಕು, ನಮ್ಮ ನೀರು ಬೇಕು. ನಮ್ಮ ಭಾಷೆ ಬೇಡವೇ? ಇಲ್ಲಿ ಬದುಕುತ್ತಿರುವವರು ಹಾಗೂ ವ್ಯಾಪಾರ–ವಹಿವಾಟು ನಡೆಸುತ್ತಿರುವವರು ಕನ್ನಡ ಭಾಷೆಯಲ್ಲಿಯೇ ವ್ಯವಹಾರಿಸಬೇಕು. ಕನ್ನಡ ಕಡ್ಡಾಯವಾಗಿ ಕಲಿಯಬೇಕು ಎಂದು ಆಗ್ರಹಿಸಿದರು.</p>.<p>ಈ ನಿಯಮ ಜನವರಿ 5 ರೊಳಗೆ ಜಾರಿ ಆಗಬೇಕು. ಇಲ್ಲವಾದರೆ, ಸಂಘಟನೆಯಿಂದಲೇ ತೆರವು ಕಾರ್ಯ ಆಗಲಿದೆ. ಇದು ಮುಂದುವರೆದರೆ ಬೃಹತ್ ಹೋರಾಟ ಕೂಡ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಎಸ್.ಕಿರಣ್ಕುಮಾರ್, ನಗರ ಘಟಕ ಅಧ್ಯಕ್ಷ ಎಚ್. ಪ್ರಫುಲ್ಲಾಚಂದ್ರ, ವಿಜಯ್, ರಾಮು, ಸತೀಶ್, ಸಂತೋಷ್,ಕೇಶವ, ಪರಮೇಶ್, ಮೊಹಮ್ಮದ್ ಷಫಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>