ರೈತ ಸಂಘಗಳು, ಕನ್ನಡ ಪರ, ದಲಿತ ಸಂಘಟನೆಗಳು, ಪ್ರಗತಿಪರರು ಭಾರಿ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದರು. ಹಲವೆಡೆ ರಸ್ತೆ ಸಂಚಾರ ತಡೆದರು. ಮಾನವ ಸರಪಳಿ ನಿರ್ಮಿಸಿದರು. ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಬಂದ್ಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರೆ, ಜೆಡಿಎಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು.