<p><strong>ಭದ್ರಾವತಿ:</strong> ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಕ್ಷೇತ್ರದಲ್ಲಿ ದಲಿತ ಚಳುವಳಿ ಹುಟ್ಟು ಹಾಕಿದ ಪ್ರೊ.ಬಿ. ಕೃಷ್ಣಪ್ಪನವರ ಹೋರಾಟದ ದಾರಿಯಲ್ಲಿ ಸಾಗುತ್ತಿರುವ ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ದಲಿತ ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದೆ’ ಎಂದು ಸಮಿತಿ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ವಿ. ವಿನೋದ್ ಅಸಮಾಧಾಮ ವ್ಯಕ್ತಪಡಿಸಿದರು.</p>.<p>ಬುಧವಾರ ನಗರದ ಸಿ.ಎನ್ ರಸ್ತೆಯ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಜರುಗಿದ ಕರ್ನಾಟಕ ದಲಿತ ಸಮನ್ವಯ ಸಮಿತಿಯ ಪ್ರಪ್ರಥಮ ಪದಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>‘ಹೊಸದಾಗಿ ದಲಿತ ಸಂಘಟನೆಯ ಅಗತ್ಯವಿದ್ದು, ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ’ ಎಂದರು.</p>.<p>‘ಕರ್ನಾಟಕ ದಲಿತ ಸಮನ್ವಯ ಸಮಿತಿ ರಾಜ್ಯಮಟ್ಟದ ಸಂಘಟನೆಯಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ರವರ ಸಂವಿಧಾನದ ಆಶಯದಂತೆ ಮತ್ತು ಕರ್ನಾಟಕದ ಅಂಬೇಡ್ಕರ್ ಎಂದೇ ಖ್ಯಾತಿ ಪಡೆದಿರುವ ಪ್ರೊ.ಬಿ. ಕೃಷ್ಣಪ್ಪನವರ ಹೋರಾಟದ ಹಾದಿಯಲ್ಲಿ ಮುನ್ನಡೆಸಲಾಗುವುದು. ಈ ಸಂಘಟನೆಯ ಮೂಲಕ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿಯಾಗಿ ಹಾಗೂ ಭವಿಷ್ಯದ ಮಕ್ಕಳ ಶಿಕ್ಷಣದ ಹಕ್ಕುಗಳು, ಅಲ್ಪಸಂಖ್ಯಾತರು, ದೀನ– ದಲಿತರ ಹಕ್ಕುಗಳಿಗಾಗಿ ಚಳವಳಿಗಳನ್ನು ರೂಪಿಸಲಾಗುವುದು’ ಎಂದು ತಿಳಿಸಿದರು. </p>.<p>‘ದಲಿತ ಹಾಗು ಪ್ರಗತಿಪರ ಎಲ್ಲಾ ಸಂಘಟನೆಗಳನ್ನು, ಹೋರಾಟಗಾರರು ಹಾಗೂ ಚಿಂತಕರನ್ನು ಸಮನ್ವಯಗೊಳಿಸಿಕೊಂಡು ಸಾಗುವ ಸದುದ್ದೇಶವನ್ನು ನೂತನ ಸಮಿತಿ ಹೊಂದಿದೆ. ರಾಜ್ಯದ ಎಲ್ಲಾ ಹೋರಾಟಗಾರರು, ಚಿಂತಕರು, ಪ್ರಗತಿಪರರು, ನೌಕರರು, ಶಿಕ್ಷಣಾಸಕ್ತರು, ಸಾಹಿತಿಗಳು ಸಮಿತಿಯೊಂದಿಗೆ ಕೈಜೋಡಿಸಲು ಕೋರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿ ವಿಭಾಗ ಮಟ್ಟದ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಲಾಗುವುದು’ ಎಂದರು.</p>.<p>ಸಾರಿಗೆ ಇಲಾಖೆಯ ಎನ್. ಮಂಜುನಾಥ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು. ಮಹದೇವಪ್ಪ ಮತ್ತು ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್. ರೇವಣಪ್ಪ ಉಪಸ್ಥಿತರಿದ್ದು.</p>.<p>ಕೇಂದ್ರ ಕಾರ್ಯಕಾರಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ಸಭೆಯನ್ನು ಸುನಿಲ್ ಕೋಟಿ ಸ್ವಾಗತಿಸಿ, ನೇತ್ರ ಕಾಳಿಂಗನಹಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಕ್ಷೇತ್ರದಲ್ಲಿ ದಲಿತ ಚಳುವಳಿ ಹುಟ್ಟು ಹಾಕಿದ ಪ್ರೊ.ಬಿ. ಕೃಷ್ಣಪ್ಪನವರ ಹೋರಾಟದ ದಾರಿಯಲ್ಲಿ ಸಾಗುತ್ತಿರುವ ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ದಲಿತ ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದೆ’ ಎಂದು ಸಮಿತಿ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ವಿ. ವಿನೋದ್ ಅಸಮಾಧಾಮ ವ್ಯಕ್ತಪಡಿಸಿದರು.</p>.<p>ಬುಧವಾರ ನಗರದ ಸಿ.ಎನ್ ರಸ್ತೆಯ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಜರುಗಿದ ಕರ್ನಾಟಕ ದಲಿತ ಸಮನ್ವಯ ಸಮಿತಿಯ ಪ್ರಪ್ರಥಮ ಪದಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>‘ಹೊಸದಾಗಿ ದಲಿತ ಸಂಘಟನೆಯ ಅಗತ್ಯವಿದ್ದು, ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ’ ಎಂದರು.</p>.<p>‘ಕರ್ನಾಟಕ ದಲಿತ ಸಮನ್ವಯ ಸಮಿತಿ ರಾಜ್ಯಮಟ್ಟದ ಸಂಘಟನೆಯಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ರವರ ಸಂವಿಧಾನದ ಆಶಯದಂತೆ ಮತ್ತು ಕರ್ನಾಟಕದ ಅಂಬೇಡ್ಕರ್ ಎಂದೇ ಖ್ಯಾತಿ ಪಡೆದಿರುವ ಪ್ರೊ.ಬಿ. ಕೃಷ್ಣಪ್ಪನವರ ಹೋರಾಟದ ಹಾದಿಯಲ್ಲಿ ಮುನ್ನಡೆಸಲಾಗುವುದು. ಈ ಸಂಘಟನೆಯ ಮೂಲಕ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿಯಾಗಿ ಹಾಗೂ ಭವಿಷ್ಯದ ಮಕ್ಕಳ ಶಿಕ್ಷಣದ ಹಕ್ಕುಗಳು, ಅಲ್ಪಸಂಖ್ಯಾತರು, ದೀನ– ದಲಿತರ ಹಕ್ಕುಗಳಿಗಾಗಿ ಚಳವಳಿಗಳನ್ನು ರೂಪಿಸಲಾಗುವುದು’ ಎಂದು ತಿಳಿಸಿದರು. </p>.<p>‘ದಲಿತ ಹಾಗು ಪ್ರಗತಿಪರ ಎಲ್ಲಾ ಸಂಘಟನೆಗಳನ್ನು, ಹೋರಾಟಗಾರರು ಹಾಗೂ ಚಿಂತಕರನ್ನು ಸಮನ್ವಯಗೊಳಿಸಿಕೊಂಡು ಸಾಗುವ ಸದುದ್ದೇಶವನ್ನು ನೂತನ ಸಮಿತಿ ಹೊಂದಿದೆ. ರಾಜ್ಯದ ಎಲ್ಲಾ ಹೋರಾಟಗಾರರು, ಚಿಂತಕರು, ಪ್ರಗತಿಪರರು, ನೌಕರರು, ಶಿಕ್ಷಣಾಸಕ್ತರು, ಸಾಹಿತಿಗಳು ಸಮಿತಿಯೊಂದಿಗೆ ಕೈಜೋಡಿಸಲು ಕೋರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲಾ ಜಿಲ್ಲೆ, ತಾಲ್ಲೂಕು, ಹೋಬಳಿ ವಿಭಾಗ ಮಟ್ಟದ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಲಾಗುವುದು’ ಎಂದರು.</p>.<p>ಸಾರಿಗೆ ಇಲಾಖೆಯ ಎನ್. ಮಂಜುನಾಥ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು. ಮಹದೇವಪ್ಪ ಮತ್ತು ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್. ರೇವಣಪ್ಪ ಉಪಸ್ಥಿತರಿದ್ದು.</p>.<p>ಕೇಂದ್ರ ಕಾರ್ಯಕಾರಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ಸಭೆಯನ್ನು ಸುನಿಲ್ ಕೋಟಿ ಸ್ವಾಗತಿಸಿ, ನೇತ್ರ ಕಾಳಿಂಗನಹಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>