<p><strong>ಶಿವಮೊಗ್ಗ</strong>: ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ–2025ನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.</p>.<p>ಶುಕ್ರವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ಈ ವಿಧೇಯಕವು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ ಪರಿಚ್ಛೇದ 19(1), ಮತ್ತು (2)ರ ಪರಿಚ್ಛೇದದಡಿ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದರು. </p>.<p>ರಾಜ್ಯ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ. ಸರಕಾರದ ವಿರುದ್ಧ ಮಾತನಾಡುವವರ ಬಾಯಿಮುಚ್ಚಿಸುವ ಸಾಧನವಾದ ಈ ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿ–ನಿಯಮಗಳ ವಿರುದ್ಧ ಟೀಕೆ ಮಾಡುವುದು, ಸಾಮಾಜಿಕ ಚರ್ಚೆ, ವ್ಯಂಗ್ಯವಾಡುವುದು ಅಥವಾ ಸತ್ಯವನ್ನು ಹೇಳುವುದನ್ನು ದ್ವೇಷ ಎಂದು ಪರಿಗಣಿಸುವ ಅಪಾಯ ಈ ವಿಧೇಯಕದಲ್ಲಿದೆ. ಇದು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುವುದಾಗಿದೆ. ಜನಸಾಮಾನ್ಯರನ್ನು ಅಪಾರಾಧಿಗಳನ್ನಾಗಿ ಮಾಡುವ ಈ ಕೀಳುಮಟ್ಟದ ಕಾಯ್ದೆ ನಮಗೆ ಬೇಕೆ? ತುಂಗಾನದಿ ತಟದಲ್ಲಿ ಮುಸ್ಲಿಮರು ಬಾಂಬ್ಬ್ಲಾಸ್ಟ್ ಮಾಡಿದ್ದನ್ನು ಪ್ರಸ್ತಾಪಿಸಿದರೆ ದ್ವೇಷ ಭಾಷಣವಾಗುತ್ತದೆಯೇ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಮೋಹನ್ರೆಡ್ಡಿ, ಅಶೋಕ್ನಾಯ್ಕ, ನಾಗರಾಜ್, ಜ್ಞಾನೇಶ್ವರ್, ಸುರೇಶ್, ಮಾಲತೇಶ್, ದೀನ್ದಯಾಳ್, ಕೆ.ವಿ. ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ–2025ನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.</p>.<p>ಶುಕ್ರವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ಈ ವಿಧೇಯಕವು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ ಪರಿಚ್ಛೇದ 19(1), ಮತ್ತು (2)ರ ಪರಿಚ್ಛೇದದಡಿ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದರು. </p>.<p>ರಾಜ್ಯ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ. ಸರಕಾರದ ವಿರುದ್ಧ ಮಾತನಾಡುವವರ ಬಾಯಿಮುಚ್ಚಿಸುವ ಸಾಧನವಾದ ಈ ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿ–ನಿಯಮಗಳ ವಿರುದ್ಧ ಟೀಕೆ ಮಾಡುವುದು, ಸಾಮಾಜಿಕ ಚರ್ಚೆ, ವ್ಯಂಗ್ಯವಾಡುವುದು ಅಥವಾ ಸತ್ಯವನ್ನು ಹೇಳುವುದನ್ನು ದ್ವೇಷ ಎಂದು ಪರಿಗಣಿಸುವ ಅಪಾಯ ಈ ವಿಧೇಯಕದಲ್ಲಿದೆ. ಇದು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುವುದಾಗಿದೆ. ಜನಸಾಮಾನ್ಯರನ್ನು ಅಪಾರಾಧಿಗಳನ್ನಾಗಿ ಮಾಡುವ ಈ ಕೀಳುಮಟ್ಟದ ಕಾಯ್ದೆ ನಮಗೆ ಬೇಕೆ? ತುಂಗಾನದಿ ತಟದಲ್ಲಿ ಮುಸ್ಲಿಮರು ಬಾಂಬ್ಬ್ಲಾಸ್ಟ್ ಮಾಡಿದ್ದನ್ನು ಪ್ರಸ್ತಾಪಿಸಿದರೆ ದ್ವೇಷ ಭಾಷಣವಾಗುತ್ತದೆಯೇ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಮೋಹನ್ರೆಡ್ಡಿ, ಅಶೋಕ್ನಾಯ್ಕ, ನಾಗರಾಜ್, ಜ್ಞಾನೇಶ್ವರ್, ಸುರೇಶ್, ಮಾಲತೇಶ್, ದೀನ್ದಯಾಳ್, ಕೆ.ವಿ. ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>