<p><strong>ಶಿವಮೊಗ್ಗ</strong>: ಕಾಮಗಾರಿಯ ಭದ್ರತಾ ಹಣ (ಎಫ್ಡಿ) ವಾಪಸ್ ಕೊಡಲು ಗುತ್ತಿಗೆದಾರನಿಂದ ₹ 30,000 ಲಂಚ ಪಡೆಯುತ್ತಿದ್ದ ಸಾಗರ ತಾಲ್ಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತಕುಮಾರ್ ಹಾಗೂ ಲೆಕ್ಕ ಶಾಖೆಯ ಸಹಾಯಕ ಜಿ.ಆರ್.ಗಿರೀಶ್ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.<p>ಶಿವಮೊಗ್ಗದ ಗುತ್ತಿಗೆದಾರ ಸತೀಶ ಚಂದ್ರ, ವಿಶ್ವವಿದ್ಯಾಲಯ ವ್ಯಾಪ್ತಿಯ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರ್ಮ್ನಲ್ಲಿನ ಕೃಷಿ ವಿಜ್ಞಾನ ಕೇಂದ್ರದ ಆಡಳಿತ ಕಚೇರಿಯ ಚಾವಣಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು. ಅದು ಈಚೆಗೆ ಮುಕ್ತಾಯಗೊಂಡು ಬಿಲ್ ಕೂಡ ಪಾವತಿಯಾಗಿತ್ತು.</p>.<p>ಕಾಮಗಾರಿಗೆ ಸಂಬಂಧಿಸಿದಂತೆ ವ್ಯತ್ಯಾಸ ಮೊತ್ತದ ಎಫ್.ಡಿ ಹಣ ₹ 63,946 ಮರಳಿಸುವಂತೆ ಗುತ್ತಿಗೆದಾರ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಆ ಬಗ್ಗೆ ಎಇಇ ಲೋಹಿತ್ ಪ್ರಶಾಂತಕುಮಾರ್ ಬಳಿ ಕೇಳಿದ್ದರು. ಆ ಹಣ ಪಡೆಯಲು ಲೆಕ್ಕ ಸಹಾಯಕ ಗಿರೀಶ್ ಅವರಿಗೆ ₹ 40,000 ಲಂಚ ತಲುಪಿಸುವಂತೆ ಅವರು ಹೇಳಿದ್ದರು. ಲಂಚ ಕೊಟ್ಟರೆ ಮಾತ್ರ ಎಫ್.ಡಿ ಮೊತ್ತ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾಗಿ ಸತೀಶ ಚಂದ್ರ ಶಿವಮೊಗ್ಗದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪೂರ್ವ ನಿಗದಿಯಂತೆ ವಿಶ್ವವಿದ್ಯಾಲಯದಲ್ಲಿ ಸತೀಶ ಚಂದ್ರ ಅವರಿಂದ ಆರೋಪಿಗಳು ₹ 30,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ಗಳಾದ ಪ್ರಕಾಶ್ ಹಾಗೂ ವೀರಬಸಪ್ಪ ಎಲ್.ಕುಸುಲಾಪುರ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕಾಮಗಾರಿಯ ಭದ್ರತಾ ಹಣ (ಎಫ್ಡಿ) ವಾಪಸ್ ಕೊಡಲು ಗುತ್ತಿಗೆದಾರನಿಂದ ₹ 30,000 ಲಂಚ ಪಡೆಯುತ್ತಿದ್ದ ಸಾಗರ ತಾಲ್ಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತಕುಮಾರ್ ಹಾಗೂ ಲೆಕ್ಕ ಶಾಖೆಯ ಸಹಾಯಕ ಜಿ.ಆರ್.ಗಿರೀಶ್ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.<p>ಶಿವಮೊಗ್ಗದ ಗುತ್ತಿಗೆದಾರ ಸತೀಶ ಚಂದ್ರ, ವಿಶ್ವವಿದ್ಯಾಲಯ ವ್ಯಾಪ್ತಿಯ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರ್ಮ್ನಲ್ಲಿನ ಕೃಷಿ ವಿಜ್ಞಾನ ಕೇಂದ್ರದ ಆಡಳಿತ ಕಚೇರಿಯ ಚಾವಣಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು. ಅದು ಈಚೆಗೆ ಮುಕ್ತಾಯಗೊಂಡು ಬಿಲ್ ಕೂಡ ಪಾವತಿಯಾಗಿತ್ತು.</p>.<p>ಕಾಮಗಾರಿಗೆ ಸಂಬಂಧಿಸಿದಂತೆ ವ್ಯತ್ಯಾಸ ಮೊತ್ತದ ಎಫ್.ಡಿ ಹಣ ₹ 63,946 ಮರಳಿಸುವಂತೆ ಗುತ್ತಿಗೆದಾರ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಆ ಬಗ್ಗೆ ಎಇಇ ಲೋಹಿತ್ ಪ್ರಶಾಂತಕುಮಾರ್ ಬಳಿ ಕೇಳಿದ್ದರು. ಆ ಹಣ ಪಡೆಯಲು ಲೆಕ್ಕ ಸಹಾಯಕ ಗಿರೀಶ್ ಅವರಿಗೆ ₹ 40,000 ಲಂಚ ತಲುಪಿಸುವಂತೆ ಅವರು ಹೇಳಿದ್ದರು. ಲಂಚ ಕೊಟ್ಟರೆ ಮಾತ್ರ ಎಫ್.ಡಿ ಮೊತ್ತ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾಗಿ ಸತೀಶ ಚಂದ್ರ ಶಿವಮೊಗ್ಗದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪೂರ್ವ ನಿಗದಿಯಂತೆ ವಿಶ್ವವಿದ್ಯಾಲಯದಲ್ಲಿ ಸತೀಶ ಚಂದ್ರ ಅವರಿಂದ ಆರೋಪಿಗಳು ₹ 30,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ಗಳಾದ ಪ್ರಕಾಶ್ ಹಾಗೂ ವೀರಬಸಪ್ಪ ಎಲ್.ಕುಸುಲಾಪುರ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>