ಕಾಮಗಾರಿಗೆ ಸಂಬಂಧಿಸಿದಂತೆ ವ್ಯತ್ಯಾಸ ಮೊತ್ತದ ಎಫ್.ಡಿ ಹಣ ₹ 63,946 ಮರಳಿಸುವಂತೆ ಗುತ್ತಿಗೆದಾರ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಆ ಬಗ್ಗೆ ಎಇಇ ಲೋಹಿತ್ ಪ್ರಶಾಂತಕುಮಾರ್ ಬಳಿ ಕೇಳಿದ್ದರು. ಆ ಹಣ ಪಡೆಯಲು ಲೆಕ್ಕ ಸಹಾಯಕ ಗಿರೀಶ್ ಅವರಿಗೆ ₹ 40,000 ಲಂಚ ತಲುಪಿಸುವಂತೆ ಅವರು ಹೇಳಿದ್ದರು. ಲಂಚ ಕೊಟ್ಟರೆ ಮಾತ್ರ ಎಫ್.ಡಿ ಮೊತ್ತ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾಗಿ ಸತೀಶ ಚಂದ್ರ ಶಿವಮೊಗ್ಗದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.