ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷ ಹತ್ಯೆ: ಮತ್ತೆ ನಾಲ್ವರ ಬಂಧನ

Last Updated 22 ಫೆಬ್ರುವರಿ 2022, 14:15 IST
ಅಕ್ಷರ ಗಾತ್ರ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಖಾಸಿಫ್‌, ಸೈಯ್ಯದ್‌ ನದೀಂ ಅವರನ್ನು ಬಂಧಿಸಿದ್ದ ಪೊಲೀಸರು ಮಂಗಳವಾರ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಕ್ಲಾರ್ಕ್‌ ಪೇಟೆಯ ರಿಹಾನ್‌ ಶರೀಫ್‌, ಆಸಿಫ್‌ ಉಲ್ಲಾಖಾನ್‌, ಮುರಾದ್‌ನಗರದ ನಿಹಾನ್‌, ಟ್ಯಾಂಕ್‌ಮೊಹಲ್ಲಾದ ಅಬ್ದುಲ್‌ ಅಫಾನ್‌ ಬಂಧಿತ ಆರೋಪಿಗಳು. ಖಾಸಿಫ್‌ ಹೊರತುಪಡಿಸಿ, ಉಳಿದ ಎಲ್ಲ ಆರೋಪಿಗಳೂ 20 ರಿಂದ 22 ವಯಸ್ಸಿನ ಒಳಗಿನವರು.

‘ಹರ್ಷ ಹತ್ಯೆಗೆ ಸಂಬಧಿಸಿದಂತೆ 12 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಅವರಲ್ಲಿ 6 ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲು ನೋಟಕ್ಕೆ ದೃಢಪಟ್ಟ ಕಾರಣ ಅವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT