ಶುಕ್ರವಾರ, ಮಾರ್ಚ್ 24, 2023
22 °C

ಇಂಡೀಕರಣ ರದ್ಧತಿಗೆ ಸಂಸತ್‌ನಲ್ಲಿ ಧ್ವನಿ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ಇಂಡೀಕರಣ ಮೂಲಕ ಅರಣ್ಯ ಇಲಾಖೆ ಪಡೆದ ಕಂದಾಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ತಾಲ್ಲೂಕಿನ ಬೇಗೂರು ಮರಡಿ ತಾಂಡಾದಲ್ಲಿ ಗುರುವಾರ ಬಂಜಾರ ಸಮುದಾಯದ ಜನರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ನಿಮ್ಮದೇ ಸರ್ಕಾರಗಳಿವೆ. ಸಂಸತ್ತಿನಲ್ಲಿ ಅರಣ್ಯ ಇಂಡೀಕರಣ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಬಗರ್ ಹುಕುಂ ಸಾಗುವಳಿದಾರಿಗೆ ಹಕ್ಕು ಪತ್ರ ದೊರಕಿಸಬೇಕು. ಈ ಕುರಿತು ಕಾಂಗ್ರೆಸ್ ಸಹ ಸಂಸತ್‌ನಲ್ಲಿ ಧ್ವನಿ ಎತ್ತಲಿದೆ. ಸಹೋದರ ಡಿ.ಕೆ.ಸುರೇಶ್ ಮುಂದಿನ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

2010ರಲ್ಲಿ ಸರ್ಕಾರ ಅರಣ್ಯ ಇಂಡೀಕರಣ ಮಾಡಿದ ಪರಿಣಾಮ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ದೊರೆಯುತ್ತಿಲ್ಲ. ಈ ಕಾನೂನು ತಿದ್ದುಪಡಿ ಮಾಡಬೇಕು. ಕಂದಾಯ ಇಲಾಖೆಗೆ ಭೂಮಿ ವರ್ಗಾವಣೆಯಾದರೆ ಶಿಕಾರಿಪುರ ತಾಲ್ಲೂಕಿನ 15 ಸಾವಿರ ಕುಟುಂಬಗಳಿಗೆ ಭೂಮಿ ಹಕ್ಕುಪತ್ರ ದೊರೆಯುತ್ತದೆ’ ಎಂದು ಮಾರವಳ್ಳಿ ಉಮೇಶ್ ಸೇರಿದಂತೆ ಹಲವರು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು