‘ಈ ಅಗ್ನಿಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಿ ಹೊರಬರುತ್ತೇನೆ. ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಹಿಸಿದಾಗ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ.ಪಕ್ಷದ ನಾಯಕರು ಈಗ ಪರ್ವ ಕಾಲವಾಗಿದ್ದು, ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದಾಗ ನಿಮಿಷವೂ ಯೋಚಿಸದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆ ಮಾಡಿದೆ. ಈಗ ಆರೋಪ ಕೇಳಿಬಂದ ಕಾರಣ ರಾಜೀನಾಮೆ ಕೊಡುತ್ತಿದ್ದೇನೆ. ನಾಲ್ಕೈದುದಿನಗಳಿಂದ ರಾಜ್ಯದ ಜನರು, ಹಿರಿಯರು, ಮಠಾಧೀಶರು, ಕಾರ್ಯಕರ್ತರು, ಮುಖಂಡರ ಪ್ರೀತಿಯನ್ನು ಕಂಡು ಮಾತು ಬಾರದಾಗಿದೆ. ಅವರೆಲ್ಲರ ಪ್ರೀತಿಗೆ ಪಾತ್ರನಾಗಿದ್ದೇನೆ. ನೀವು ಸಂತೋಷದಿಂದ ನನ್ನನ್ನು ಕಳಿಸಿಕೊಡಿ’ ಎಂದು ಕೇಳಿಕೊಂಡರು.