<p><strong>ಶಿವಮೊಗ್ಗ:</strong> ‘ರಾಜ್ಯದಲ್ಲಿ ₹ 3,000 ಕೋಟಿ ವೆಚ್ಚದಲ್ಲಿ ಆರಂಭಿಸಲಿರುವ 800 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಮುಖ್ಯಮಂತ್ರಿ ನವೆಂಬರ್ ಎರಡನೇ ವಾರ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಇಲ್ಲಿ ತಿಳಿಸಿದರು.</p>.<p>‘ಈ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಮನೆಯಿಂದ ಕರೆತರಲು, ಬಿಟ್ಟುಬರಲು ಇಲಾಖೆಯಿಂದಲೇ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಲು ಈ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಆಯಾ ಶಾಲೆಯ ಆಡಳಿತ ಮಂಡಳಿಗಳೇ ಬಸ್ನ ನಿರ್ವಹಣೆ ಮಾಡಲಿವೆ’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪದವಿಪೂರ್ವ ಕಾಲೇಜಿನ 800, ಸರ್ಕಾರಿ ಶಾಲೆಗಳ 13,000 ಹಾಗೂ ಅನುದಾನಿತ ಶಾಲೆಗಳ 6,000 ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಡಿ.7ಕ್ಕೆ ಟಿಇಟಿ: ಅದಕ್ಕೆ ಪೂರ್ವಭಾವಿಯಾಗಿ ಡಿ.7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ. ಅಕ್ಟೋಬರ್ 23ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ಹಾಜರಾಗುವವರು ನವೆಂಬರ್ 9ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಿಸಿದರು.</p>.<div><blockquote>ಬಿಜೆಪಿ ಆಡಳಿತದ 3.5 ವರ್ಷದ ಅವಧಿಯಲ್ಲಿ ಕೇವಲ 4700 ಶಿಕ್ಷಕರ ನೇಮಕವಾಗಿತ್ತು. ಕಾಂಗ್ರೆಸ್ ಆಡಳಿತಕ್ಕೆ ಬಂದು 2.5 ವರ್ಷದ ಅವಧಿಯಲ್ಲಿಯೇ ಒಟ್ಟು 30000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಟೀಕಾಕಾರರಿಗೆ ಉತ್ತರ ಕೊಡಲಾಗುವುದು </blockquote><span class="attribution">ಮಧು ಎಸ್.ಬಂಗಾರಪ್ಪ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ರಾಜ್ಯದಲ್ಲಿ ₹ 3,000 ಕೋಟಿ ವೆಚ್ಚದಲ್ಲಿ ಆರಂಭಿಸಲಿರುವ 800 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಮುಖ್ಯಮಂತ್ರಿ ನವೆಂಬರ್ ಎರಡನೇ ವಾರ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಇಲ್ಲಿ ತಿಳಿಸಿದರು.</p>.<p>‘ಈ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಮನೆಯಿಂದ ಕರೆತರಲು, ಬಿಟ್ಟುಬರಲು ಇಲಾಖೆಯಿಂದಲೇ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಲು ಈ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಆಯಾ ಶಾಲೆಯ ಆಡಳಿತ ಮಂಡಳಿಗಳೇ ಬಸ್ನ ನಿರ್ವಹಣೆ ಮಾಡಲಿವೆ’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಪದವಿಪೂರ್ವ ಕಾಲೇಜಿನ 800, ಸರ್ಕಾರಿ ಶಾಲೆಗಳ 13,000 ಹಾಗೂ ಅನುದಾನಿತ ಶಾಲೆಗಳ 6,000 ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಡಿ.7ಕ್ಕೆ ಟಿಇಟಿ: ಅದಕ್ಕೆ ಪೂರ್ವಭಾವಿಯಾಗಿ ಡಿ.7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ. ಅಕ್ಟೋಬರ್ 23ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ಹಾಜರಾಗುವವರು ನವೆಂಬರ್ 9ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಿಸಿದರು.</p>.<div><blockquote>ಬಿಜೆಪಿ ಆಡಳಿತದ 3.5 ವರ್ಷದ ಅವಧಿಯಲ್ಲಿ ಕೇವಲ 4700 ಶಿಕ್ಷಕರ ನೇಮಕವಾಗಿತ್ತು. ಕಾಂಗ್ರೆಸ್ ಆಡಳಿತಕ್ಕೆ ಬಂದು 2.5 ವರ್ಷದ ಅವಧಿಯಲ್ಲಿಯೇ ಒಟ್ಟು 30000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಟೀಕಾಕಾರರಿಗೆ ಉತ್ತರ ಕೊಡಲಾಗುವುದು </blockquote><span class="attribution">ಮಧು ಎಸ್.ಬಂಗಾರಪ್ಪ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>