<p><strong>ಶಿವಮೊಗ್ಗ:</strong> ಮಲೆನಾಡಿನಲ್ಲಿ ಬಿಟ್ಟೂಬಿಡದೇ ಸುರಿಯುತ್ತಿರುವ ಮಳೆ ಶುಕ್ರವಾರವೂ ತನ್ನ ಆರ್ಭಟ ಮುಂದುವರಿಸಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ಹುಲಿಕಲ್ನಲ್ಲಿ 18 ಸೆಂ.ಮೀ ಮಳೆಯಾಗಿದೆ. ಭದ್ರಾ, ಲಿಂಗನಮಕ್ಕಿ, ಮಾಣಿ ಹಾಗೂ ತುಂಗಾ ಜಲಾಶಯಗಳ ಒಳಹರಿವು ಮತ್ತಷ್ಟು ಹೆಚ್ಚಿದೆ.</p>.<p>ಮಳೆ–ಗಾಳಿಯಿಂದ ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ– ನಿಟ್ಟೂರು ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಆದರೆ ಲೈನ್ನಲ್ಲಿ ವಿದ್ಯುತ್ ಸಂಚಾರ ಇಲ್ಲದ ಕಾರಣ, ಯಾವುದೇ ಅನಾಹುತ ಆಗಿಲ್ಲ.</p>.<p>ಸಾಗರ ತಾಲ್ಲೂಕಿನ ತುಮರಿ ಬಳಿಯ ಮುಪ್ಪಾನೆಯಲ್ಲಿ ಶರಾವತಿ ಹಿನ್ನೀರಿನಲ್ಲಿ ಗುರುವಾರ ರಾತ್ರಿ ಭಾರೀ ಗಾಳಿ–ಮಳೆಯ ಹೊಡೆತಕ್ಕೆ ಸಮೀಪದ ಲಾಂಚ್ಗಳು ತೇಲಿ ಹೋಗಿದೆ. ಸುಮಾರು 3 ಕಿಲೋ ಮೀಟರ್ ದೂರದ ಜಲಾನಯನ ಪ್ರದೇಶದ ಮಂಡವಳ್ಳಿ ಭಾಗಕ್ಕೆ ತೇಲಿ ಹೋಗಿದ್ದ ಲಾಂಚ್ಗಳನ್ನು ಶುಕ್ರವಾರ ಬೆಳಿಗ್ಗೆ ಸ್ಥಳೀಯ ಮೀನುಗಾರರ ಸಹಾಯದಿಂದ ತೀರಕ್ಕೆ ಎಳೆದು ತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮಲೆನಾಡಿನಲ್ಲಿ ಬಿಟ್ಟೂಬಿಡದೇ ಸುರಿಯುತ್ತಿರುವ ಮಳೆ ಶುಕ್ರವಾರವೂ ತನ್ನ ಆರ್ಭಟ ಮುಂದುವರಿಸಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ಹುಲಿಕಲ್ನಲ್ಲಿ 18 ಸೆಂ.ಮೀ ಮಳೆಯಾಗಿದೆ. ಭದ್ರಾ, ಲಿಂಗನಮಕ್ಕಿ, ಮಾಣಿ ಹಾಗೂ ತುಂಗಾ ಜಲಾಶಯಗಳ ಒಳಹರಿವು ಮತ್ತಷ್ಟು ಹೆಚ್ಚಿದೆ.</p>.<p>ಮಳೆ–ಗಾಳಿಯಿಂದ ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ– ನಿಟ್ಟೂರು ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಆದರೆ ಲೈನ್ನಲ್ಲಿ ವಿದ್ಯುತ್ ಸಂಚಾರ ಇಲ್ಲದ ಕಾರಣ, ಯಾವುದೇ ಅನಾಹುತ ಆಗಿಲ್ಲ.</p>.<p>ಸಾಗರ ತಾಲ್ಲೂಕಿನ ತುಮರಿ ಬಳಿಯ ಮುಪ್ಪಾನೆಯಲ್ಲಿ ಶರಾವತಿ ಹಿನ್ನೀರಿನಲ್ಲಿ ಗುರುವಾರ ರಾತ್ರಿ ಭಾರೀ ಗಾಳಿ–ಮಳೆಯ ಹೊಡೆತಕ್ಕೆ ಸಮೀಪದ ಲಾಂಚ್ಗಳು ತೇಲಿ ಹೋಗಿದೆ. ಸುಮಾರು 3 ಕಿಲೋ ಮೀಟರ್ ದೂರದ ಜಲಾನಯನ ಪ್ರದೇಶದ ಮಂಡವಳ್ಳಿ ಭಾಗಕ್ಕೆ ತೇಲಿ ಹೋಗಿದ್ದ ಲಾಂಚ್ಗಳನ್ನು ಶುಕ್ರವಾರ ಬೆಳಿಗ್ಗೆ ಸ್ಥಳೀಯ ಮೀನುಗಾರರ ಸಹಾಯದಿಂದ ತೀರಕ್ಕೆ ಎಳೆದು ತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>