<p><strong>ಶಿವಮೊಗ್ಗ/ದಾವಣಗೆರೆ</strong>: ಧಾರಾಕಾರ ಮಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಜನಜೀವನ ಏರುಪೇರಾಗಿದೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ ಸರಾಸರಿ 4.16 ಸೆಂ.ಮೀ ಮಳೆ ದಾಖಲಾಗಿದೆ. </p>.<p>ತುಂಗ–ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ ಜಲಾಶಯದಿಂದ 76,000 ಕ್ಯುಸೆಕ್ ನೀರು ಹೊರಬಿಟ್ಟಿದ್ದು, ಕೋರ್ಪಾಲಯ್ಯನ ಛತ್ರದ ಮಂಟಪ ಮುಳುಗಡೆ ಆಗಿದೆ. </p>.<p>ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಸಂಪರ್ಕಿಸುವ ಪತ್ಯಾಪುರ ಸೇತುವೆ ಮುಳುಗಿದೆ.</p>.<p>ತುಂಗಾ ಜಲಾಶಯದಿಂದ 77,000 ಕ್ಯೂಸೆಕ್, ಭದ್ರಾ ಜಲಾಶಯದಿಂದ 40,000 ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಹೊನ್ನಾಳಿಯಲ್ಲಿ ನದಿತೀರದಲ್ಲಿದ್ದ 8 ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ. </p>.<p>ಪತ್ಯಾಪುರ ಸೇತುವೆ ಮುಳುಗಿದ್ದು, ಉಕ್ಕಡಗಾತ್ರಿ ಕರಿಬಸವೇಶ್ವರಸ್ವಾಮಿ ಭಕ್ತರು ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿ, ಮಲ್ಲನಾಯಕನಹಳ್ಳಿ ಮಾರ್ಗವಾಗಿ ಉಕ್ಕಡಗಾತ್ರಿಗೆ ತಲುಪಬೇಕಿದೆ.</p>.<p><strong>ಚಿತ್ರದುರ್ಗ ವರದಿ:</strong> ಚಿತ್ರದುರ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಿರಿಯೂರು, ಚಳ್ಳಕೆರೆ ತಾಲ್ಲೂಕಿನ ಹಲವೆಡೆ ಈರುಳ್ಳಿ ಬೆಳೆ ಕೊಚ್ಚಿಹೋಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ/ದಾವಣಗೆರೆ</strong>: ಧಾರಾಕಾರ ಮಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಜನಜೀವನ ಏರುಪೇರಾಗಿದೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ ಸರಾಸರಿ 4.16 ಸೆಂ.ಮೀ ಮಳೆ ದಾಖಲಾಗಿದೆ. </p>.<p>ತುಂಗ–ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ ಜಲಾಶಯದಿಂದ 76,000 ಕ್ಯುಸೆಕ್ ನೀರು ಹೊರಬಿಟ್ಟಿದ್ದು, ಕೋರ್ಪಾಲಯ್ಯನ ಛತ್ರದ ಮಂಟಪ ಮುಳುಗಡೆ ಆಗಿದೆ. </p>.<p>ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಸಂಪರ್ಕಿಸುವ ಪತ್ಯಾಪುರ ಸೇತುವೆ ಮುಳುಗಿದೆ.</p>.<p>ತುಂಗಾ ಜಲಾಶಯದಿಂದ 77,000 ಕ್ಯೂಸೆಕ್, ಭದ್ರಾ ಜಲಾಶಯದಿಂದ 40,000 ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಹೊನ್ನಾಳಿಯಲ್ಲಿ ನದಿತೀರದಲ್ಲಿದ್ದ 8 ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ. </p>.<p>ಪತ್ಯಾಪುರ ಸೇತುವೆ ಮುಳುಗಿದ್ದು, ಉಕ್ಕಡಗಾತ್ರಿ ಕರಿಬಸವೇಶ್ವರಸ್ವಾಮಿ ಭಕ್ತರು ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿ, ಮಲ್ಲನಾಯಕನಹಳ್ಳಿ ಮಾರ್ಗವಾಗಿ ಉಕ್ಕಡಗಾತ್ರಿಗೆ ತಲುಪಬೇಕಿದೆ.</p>.<p><strong>ಚಿತ್ರದುರ್ಗ ವರದಿ:</strong> ಚಿತ್ರದುರ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಿರಿಯೂರು, ಚಳ್ಳಕೆರೆ ತಾಲ್ಲೂಕಿನ ಹಲವೆಡೆ ಈರುಳ್ಳಿ ಬೆಳೆ ಕೊಚ್ಚಿಹೋಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>