ಯಕ್ಷಗಾನ ಕಲಾವಿದ ರಮೇಶ್ ಆಚಾರ್ಯಅವರದು ತೀರ್ಥಹಳ್ಳಿ ತಾಲ್ಲೂಕು ಮುತ್ತೂರು ಹೋಬಳಿ ಕಟ್ಟೆಹಕ್ಕಲು–ಆಲ್ಮನೆ ಐದನೇ ತರಗತಿ ಓದುವಾಗಲೇ ಯಕ್ಷಗಾನದತ್ತ ವಾಲಿದ್ದರು.ಯಕ್ಷಗಾನ ರಂಗದಲ್ಲಿ 57 ವರ್ಷ ಸೇವೆ ಸಲ್ಲಿಸಿದ್ದಾರೆ. ಧರ್ಮಸ್ಥಳ, ಸುರತ್ಕಲ್, ತೀರ್ಥಳ್ಳಿ, ಸೋಮವಾರ ಸಂತೆಮೊದಲಾದ ಯಕ್ಷಗಾನ ಮಂಡಳಿಗಳಲ್ಲಿ ಕಲಾವಿದರಾಗಿ, ಪದ್ಯ ರಚನಾಕಾರ, ನಿರ್ದೇಶಕ, ತಾಳಮದ್ದಲೆ ಅರ್ಥದಾರಿಯಾಗಿ ಪಾಂಡಿತ್ಯ ಹೊಂದಿದ್ದಾರೆ. ಕಿರಿಯ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದಾರೆ.