ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ವಿಪರೀತ ಶೀತ, ಜ್ವರದಿಂದ ಬಳಲುತ್ತಿದ್ದ ಶ್ರೀಗಳು 4 ದಿನಗಳ ಹಿಂದೆ ಪಟ್ಟಣದ ಜೆ.ಸಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದಿದ್ದರು. ಸೋಂಕು ಉಲ್ಬಣಗೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಯಮಾವಳಿ ಅನ್ವಯ ಕವಲೇದುರ್ಗ ಮಠದ ಆವರಣದಲ್ಲಿ ಶ್ರೀಗಳ ಅಂತ್ಯ ಸಂಸ್ಕಾರ ಕಾರ್ಯ ನಡೆಯಿತು.