ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ರುದ್ರಮುನಿ ಎನ್. ಸಜ್ಜನ್ ವಹಿಸಲಿದ್ದು, ವಿಮರ್ಶಕಿ ಡಾ.ಎಂ.ಎಸ್. ಆಶಾದೇವಿ ಅಭಿನಂದನಾ ನುಡಿ ನುಡಿಯಲಿದ್ದಾರೆ. ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಹಾಸಭಾ ಉಪಾಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ, ಶಾಸಕರಾದ ಬಿ.ಕೆ.ಸಂಗಮೇಶ್, ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಕುವೆಂಪು ವಿ.ವಿ. ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ, ಕೃಷಿ ಮತ್ತು ತೋಟಗಾರಿಕೆ ವಿ.ವಿ. ಕುಲಪತಿ ಡಾ.ಆರ್.ಸಿ.ಜಗದೀಶ್, ಬಿ.ಎಸ್. ಅರುಣಾದೇವಿ, ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದರು.