‘ಕೆಂಡದ ಮಳೆ ಕರೆವಲ್ಲಿ’ ನಾಟಕ ಕೃತಿ ಗ್ರಾಮೀಣ ಜನರ ಬದುಕಿನ ಚಿತ್ರಣ ತೆರೆದಿಡುತ್ತದೆ. ಅಲ್ಪಸಂಖ್ಯಾತ ಕುಟುಂಬ ಅನುಭವಿಸುವ ನೋವು, ಅವರ ಮೇಲಾಗುವ ದೌರ್ಜನ್ಯ, ಅಲ್ಲಿನ ಪರಿಸರದ ಜತೆ ಹೊಂದಾಣಿಕೆ ಮಾಡಿಕೊಂಡು ಬದುಕು ನಡೆಸುವ ಅನಿವಾರ್ಯ, ಅಸಹಾಯಕತೆ, ಶ್ರೀಮಂತರ ದಬ್ಬಾಳಿಕೆ, ಪೊಲೀಸರ ಭ್ರಷ್ಟಾಚಾರದ ಕಥನವನ್ನು ಸಾಸ್ವೆಹಳ್ಳಿ ಸತೀಶ್ ಅವರು ಚುರುಕು ಸಂಭಾಷಣೆಗಳ ಮೂಲಕ ಪರಿಣಾಮಕಾರಿಯಾಗಿ ಚಿತ್ರಿಸಿದ್ದಾರೆ ಎಂದು ವಿಶ್ಲೇಷಿಸಿದರು.