<p>ಸಾಗರ: ಇಲ್ಲಿನ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಕೆಎಫ್ಡಿ (ಮಂಗನ ಕಾಯಿಲೆ) ಕಾಣಿಸಿಕೊಳ್ಳುತ್ತಿರುವ ಕಾರಣ ಕೆಎಫ್ಡಿ ಕಾರ್ಯ ಕ್ಷೇತ್ರಕ್ಕೆ ಮೂರು ವಾಹನಗಳನ್ನು ಮಂಜೂರು ಮಾಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದಾರೆ.</p>.<p>ಕೆಎಫ್ಡಿ ಬಾಧಿತ ಪ್ರದೇಶಗಳು ದಟ್ಟ ಅರಣ್ಯ ಮತ್ತು ಕಡಿದಾದ ಗುಡ್ಡಗಾಡುಗಳಿಂದ ಕೂಡಿದೆ. ಇಂತಹ ದುರ್ಗಮ ಪ್ರದೇಶಗಳಲ್ಲಿರುವ ಕೆಎಫ್ಡಿ ಶಂಕಿತರ ಮನೆಗಳಿಗೆ ತೆರಳಿ ಸರ್ವೇಕ್ಷಣೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ವಾಹನಗಳ ತುರ್ತು ಅವಶ್ಯಕತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಸ್ತುತ ಇಲಾಖೆಯಿಂದ ಹೊರಗುತ್ತಿಗೆ ಆಧಾರದ ಮೇಲೆ ವಾಹನಗಳನ್ನು ಪಡೆಯಲು ಅನುಮತಿ ಇದ್ದರೂ ಈಗಿರುವ ನಿಯಮಗಳ ಪ್ರಕಾರ ಸಣ್ಣ ಮಾದರಿಯ ಕಾರುಗಳನ್ನು ಮಾತ್ರ ಬಳಸಬಹುದಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಂಚರಿಸಲು ಈ ಮಾದರಿಯ ವಾಹನಗಳಿಗೆ ಕಷ್ಟಸಾಧ್ಯವಾಗಿದೆ. ಹಾಗಾಗಿ ಜೀಪ್ ಅಥವಾ ಬೊಲೆರೋ ಮಾದರಿಯ ವಾಹನ ಪೂರೈಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಇಲ್ಲಿನ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಕೆಎಫ್ಡಿ (ಮಂಗನ ಕಾಯಿಲೆ) ಕಾಣಿಸಿಕೊಳ್ಳುತ್ತಿರುವ ಕಾರಣ ಕೆಎಫ್ಡಿ ಕಾರ್ಯ ಕ್ಷೇತ್ರಕ್ಕೆ ಮೂರು ವಾಹನಗಳನ್ನು ಮಂಜೂರು ಮಾಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದಾರೆ.</p>.<p>ಕೆಎಫ್ಡಿ ಬಾಧಿತ ಪ್ರದೇಶಗಳು ದಟ್ಟ ಅರಣ್ಯ ಮತ್ತು ಕಡಿದಾದ ಗುಡ್ಡಗಾಡುಗಳಿಂದ ಕೂಡಿದೆ. ಇಂತಹ ದುರ್ಗಮ ಪ್ರದೇಶಗಳಲ್ಲಿರುವ ಕೆಎಫ್ಡಿ ಶಂಕಿತರ ಮನೆಗಳಿಗೆ ತೆರಳಿ ಸರ್ವೇಕ್ಷಣೆ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ವಾಹನಗಳ ತುರ್ತು ಅವಶ್ಯಕತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಸ್ತುತ ಇಲಾಖೆಯಿಂದ ಹೊರಗುತ್ತಿಗೆ ಆಧಾರದ ಮೇಲೆ ವಾಹನಗಳನ್ನು ಪಡೆಯಲು ಅನುಮತಿ ಇದ್ದರೂ ಈಗಿರುವ ನಿಯಮಗಳ ಪ್ರಕಾರ ಸಣ್ಣ ಮಾದರಿಯ ಕಾರುಗಳನ್ನು ಮಾತ್ರ ಬಳಸಬಹುದಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಂಚರಿಸಲು ಈ ಮಾದರಿಯ ವಾಹನಗಳಿಗೆ ಕಷ್ಟಸಾಧ್ಯವಾಗಿದೆ. ಹಾಗಾಗಿ ಜೀಪ್ ಅಥವಾ ಬೊಲೆರೋ ಮಾದರಿಯ ವಾಹನ ಪೂರೈಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>