ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಘಟನೆಗೆ ಬಿಜೆಪಿ ಕಾರಣವಾಗಿದ್ದರೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ವಿಧಾನ ಪರಿಷತ್ ಸಭಾಪತಿ ಅವರನ್ನು ಕಲಾಪಕ್ಕೆ ಬಾರದಂತೆ ತಡೆದಿದ್ದಾರೆ. ಬಾಗಿಲು ಮುಚ್ಚಿದ್ದಾರೆ. ಅವರ ಅನುಮತಿ ಇಲ್ಲದೇ ಉಪ ಸಭಾಪತಿಗಳನ್ನು ಪೀಠದ ಮೇಲೆ ಕೂರಿಸಿ, ಕಲಾಪ ನಡೆಸಲು ಹೊರಟ ಬಿಜೆಪಿ ಸದಸ್ಯರ ವರ್ತನೆ ಖಂಡನೀಯ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.