ಜೆಡಿಎಸ್, ಕಾಂಗ್ರೆಸ್, ಪಕ್ಷೇತರರ ಮಧ್ಯೆ ಮೊದಲಿನಿಂದಲೂ ಸ್ಪರ್ಧೆ ಇದೆ. ಅಲ್ಲಿ ಬಿಜೆಪಿ ಹೆಸರೇ ಇಲ್ಲ. ಭದ್ರಾವತಿಯ ಚುನಾವಣೆಯ ಇತಿಹಾಸದಲ್ಲಿ ಬಿಜೆಪಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಶಾಸಕ ಸ್ಥಾನ ಗೆದ್ದಿಲ್ಲ.ಭದ್ರಾವತಿಯಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಬಿಜೆಪಿಯ ಕಾರ್ಯಕರ್ತರೇ ಗಲಾಟೆಗೆ ಪ್ರಚೋದನೆ ನೀಡಿದ್ದಾರೆ. ಕ್ಷುಲ್ಲಕ ಕಾರಣವನ್ನೇ ಬಂಡವಾಳ ಮಾಡಿಕೊಂಡು ಗಲಭೆ ಸೃಷ್ಟಿಸಿದ್ದಾರೆ. ಆಟಕ್ಕೂ ಧಾರ್ಮಿಕ ಭಾವನೆ ಸೇರಿಸುವ ಮೂಲಕ ಮತಗಳಿಕೆಗಾಗಿ ಭದ್ರಾವತಿಯನ್ನೇ ಅಶಾಂತಿಗೆ ದೂಡುವ ಪ್ರಯತ್ನ ಮಾಡುತ್ತಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.