20 ವರ್ಷಗಳ ನಿವೇಶನ ಹಂಚಿಕೆಯನ್ನು ಸಿಐಡಿ ತನಿಖೆ ನಡೆಸಲು ಆರಗ ಮುಂದಾಗಿದ್ದಾರೆ. ಗೃಹ ಸಚಿವ ಸ್ಥಾನದಲ್ಲಿದ್ದರೂ 5 ವರ್ಷಗಳ ಹಿಂದಿನ ನಂದಿತಾ ಪ್ರಕರಣ ಯಾಕೆ ಪುನಃ ತನಿಖೆ ನಡೆಸುತ್ತಿಲ್ಲ. ತನಿಖೆ ನಡೆದರೆ ಆರಗ ವಿರುದ್ಧ ಸಾಕ್ಷಿ ನಾಶ, ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ. ಸಿಎಂ ಕಾರ್ಯಕ್ರಮಕ್ಕೆ ಜನ ಸೇರಿಸಲು ಅಧಿಕಾರಿಗಳ ಬಳಕೆ ಮಾಡುತ್ತಿದ್ದಾರೆ ಎಂದರು. ಕೆಪಿಸಿಸಿ ಸದಸ್ಯ ನಾರಾಯಣ ರಾವ್, ಕೆಸ್ತೂರು ಮಂಜುನಾಥ, ಮುಡುಬ ರಾಘವೇಂದ್ರ, ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಮುಖಂಡ ಕಡ್ತೂರು ದಿನೇಶ್ ಇದ್ದರು.