ಬ್ರಿಟಿಷರ ವಿರುದ್ಧ ವ್ಯವಸ್ಥಿತವಾಗಿ ಹೋರಾಟ ನಡೆಸಿ, ಕಿತ್ತೂರು ಸಂಸ್ಥಾನವನ್ನು ಉಳಿಸಲು ಕೊನೆಯವರೆಗೂ ಹೋರಾಡಿ ತನ್ನ ಪ್ರಾಣವನ್ನೇ ಬಲಿಕೊಟ್ಟ ಮಹಿಳೆ. ಅವರ ಬದುಕು ಒಂದು ಯಶೋಗಾಥೆ. ಚನ್ನಮ್ಮ ದೇಶಪ್ರೇಮದ ಸಂಕೇತ. ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಬ್ರಿಟಿಷರ ವಿರುದ್ಧ ಮೊದಲ ಹೋರಾಟದಲ್ಲಿ ಗೆದ್ದು, ಸಂಸ್ಥಾನವನ್ನು ಸ್ವತಂತ್ರಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.