<p>ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದಿನಿಂದ ಆರಂಭವಾಗಿರುವ ನಗರ ದೇವತೆ ಕೋಟೆ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವದ ಸಂಭ್ರಮ ಗರಿಗೆದರಿದೆ. ಮಂಗಳವಾರ ನಸುಕಿನಲ್ಲಿ ತುಂಗಾ ನದಿಯಲ್ಲಿ ಗಂಗೆ ಪೂಜೆ ಮಾಡುವ ಮೂಲಕ ದೇವಿಯ ಪೂಜಾ ಕಾರ್ಯಕ್ರಮ ಆರಂಭಗೊಂಡಿದ್ದು, ಜಾತ್ರೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ಜಾತ್ರೆಯಲ್ಲಿ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.</p>