ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಎನ್ಎಸ್ಯುಐ ವತಿಯಿಂದ ಭಾನುವಾರ ನೂರಾರು ಆಟೊ ಚಾಲಕರಿಗೆ ಸಮವಸ್ತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಎನ್ಎಸ್ಯುಐ ಜಿಲ್ಲಾ ಅಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್ ಶೆಟ್ಟಿ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ, ರವಿ ಕಾಟಿಕೆರೆ, ಚಂದ್ರೋಜಿ ರಾವ್, ಯುವಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ಮಹಮ್ಮದ್ ನಿಹಾಲ್ ಇದ್ದರು.
ಮೆಗ್ಗಾನ್ ಆಸ್ಪತ್ರೆ ರೋಗಿಗಳಿಗೆ ಅನ್ನಸಂತರ್ಪಣೆ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರ ನೇತೃತ್ವದಲ್ಲಿ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ನಿಮಿತ್ತ ಮೆಗ್ಗಾನ್ ಆಸ್ಪತ್ರೆಯ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.
ಪಕ್ಷದ ಪ್ರಮುಖರಾದ ಶಿವಕುಮಾರ್, ಸೌಗಂಧಿಕಾ, ರೇಖಾ ರಂಗನಾಥ್, ರಾಮೇಗೌಡ , ರುದ್ರೇಗೌಡ, ತಿಮ್ಮರಾಜು, ತಬಸುಂ, ಸುಮಾ, ಸಂಜಯ್ ಇದ್ದರು.
ಸಾಧಕರಿಗೆ ಸನ್ಮಾನ: ಡಿ.ಕೆ. ಶಿವಕುಮಾರ್ ಅವರ 60ನೇ ವರ್ಷದ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಮತ್ತು ಸಮಾಜದ ಅಧ್ಯಕ್ಷರು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ಹಾಗೂ ಪುನೀತ್ ರಾಜ್ಕುಮಾರ್ ನುಡಿ ನಮನ ಕಾರ್ಯಕ್ರಮ ನಡೆಯಿತು.
ಹಾರನಹಳ್ಳಿ ಚೌಕಿ ಮಠದ ಶ್ರೀ ನೀಲಕಂಠ ಸ್ವಾಮೀಜಿ, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಾಂಗ್ರೆಸ್ ವಕ್ತಾರ ನಿಖಿತ್ ರಾಜ್ ಅವರು ಪುನೀತ್ ರಾಜ್ಕುಮಾರ್ಗೆ ನುಡಿನಮನ ಸಲ್ಲಿಸಿದರು. ಶಾಸಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ. ಬಿಪ್ರಸನ್ನಕುಮಾರ್, ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಆರ್. ಮೋಹನ್ ಅವರೂ ಈ ಸಂದರ್ಭದಲ್ಲಿ ಇದ್ದರು.