ಅಡಿಕೆ, ತೆಂಗು, ಬಾಳೆ, ಶುಂಠಿ, ಕಾಳುಮೆಣಸು, ಕರ್ಬೂಜ, ಕಲ್ಲಂಗಡಿ, ಮಾವು, ಶ್ರೀಗಂಧ, ಸಾಗುವನಿ ಸೇರಿ ಹಲವು ಬೆಳೆಗಳನ್ನು ಬೆಳೆದಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ಕೃಷಿ ಭೂಮಿಯಲ್ಲಿ ದೀರ್ಘಾವಧಿಯ ಹಣ್ಣುಗಳನ್ನು ಬೆಳೆಯಲು ತಯಾರಿ ನಡೆಸಿದ್ದಾರೆ. ಪ್ರಸ್ತುತ ತಮ್ಮ ಕೃಷಿ ಭೂಮಿಯಲ್ಲಿ ವಿವಿಧ ಬೆಳೆ ಬೆಳೆದು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ, ಲಾಕ್ಡೌನ್ ಸಂದರ್ಭದಲ್ಲಿ ಶುಂಠಿ ಬೆಳೆಗೆ ಉತ್ತಮ ಬೆಲೆ ದೊರೆಯದ ಕಾರಣ ಸ್ವಲ್ಪ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.