‘ಹಾಸನ ಜಿಲ್ಲೆಯಲ್ಲಿ ದೇವೇಗೌಡ, ರೇವಣ್ಣ, ಕುಮಾರಸ್ವಾಮಿಯಂತಹ ನಾಯಕರ ನಡುವೆ ಪ್ರೀತಂ ಗೌಡ ಗೆದ್ದು ಬಂದಿದ್ದಾರೆ. ಸತತವಾಗಿ ಪಕ್ಷವನ್ನು ಕಟ್ಟಲು ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ದೇವೇಗೌಡ ಅವರನ್ನು ಭೇಟಿ ಮಾಡಿರುವುದು ಪ್ರೀತಂ ಗೌಡರಿಗೆ ಸಮಾಧಾನ ತಂದಿಲ್ಲ. ಆದರೆ, ಬೊಮ್ಮಾಯಿ ಅವರು ಜನತಾದಳದ ನಾಯಕ ದೇವೇಗೌಡರು ಎಂದು ಹೋಗಿಲ್ಲ. ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ರೈತ ನಾಯಕರು ಎಂದು ಹೋಗಿದ್ದಾರೆ. ಇದರಿಂದ ನಮ್ಮ ಸಂಘಟನೆಗೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.