<p><strong>ಶಿವಮೊಗ್ಗ: </strong>ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ರಾಜ್ಯಸಭಾ ಚುನಾವಣೆಗೆ ಆಯ್ಕೆಮಾಡಿದ ಬಿಜೆಪಿ ವರಿಷ್ಠರ ನಿರ್ಧಾರ ಸ್ವಾಗತಾರ್ಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆಅವರು ಮಾತನಾಡಿದರು.</p>.<p>ಸಾಮಾನ್ಯ ಕಾರ್ಯಕರ್ತರೂರಾಜ್ಯಸಭೆಗೆ ಆಯ್ಕೆಯಾಗಬಹುದು ಎಂಬ ಸಂದೇಶ ವರಿಷ್ಟರುನೀಡಿದ್ದಾರೆ. ಇಂತಹ ನಿರ್ಧಾರಬಿಜೆಪಿಯಲ್ಲಿ ಮಾತ್ರ ಸಾಧ್ಯ. ಅಶೋಕ್ ಗಸ್ತಿ, ಈರಣ್ಣ ಕಡಾಡಿಅವರು 40 ವರ್ಷಗಳಿಂದಪಕ್ಷಕ್ಕೆಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ವರಿಷ್ಠರುಗುರುತಿಸಿದ್ದಾರೆ. ಈ ಆಯ್ಕೆ ಪಕ್ಷದ ಕಾರ್ಯಕರ್ತರಿಗೂ ಸಂತಸ ತಂದಿದೆ. ಸಣ್ಣ ಸಣ್ಣ ಜಾತಿಗಳಿಗೂಬಿಜಿಪಿ ಆದ್ಯತೆ ನೀಡುತ್ತದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.</p>.<p>ಪಕ್ಷದ ರಾಜ್ಯ ಚುನಾವಣಾಸಮಿತಿ ಕಳಿಸಿದ ಪಟ್ಟಿಯಲ್ಲಿ ಈ ಇಬ್ಬರ ಹೆಸರು ಇರಲ್ಲಿಲ್ಲ. ಆದರೆ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಕಳಿಸಿದ ಪಟ್ಟಿಯಲ್ಲಿ ಇಬ್ಬರ ಹೆಸರು ಇತ್ತು. ಅನಿರೀಕ್ಷಿತ ಆಯ್ಕೆ ಕಾರಣಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ರಾಜ್ಯಸಭಾ ಚುನಾವಣೆಗೆ ಆಯ್ಕೆಮಾಡಿದ ಬಿಜೆಪಿ ವರಿಷ್ಠರ ನಿರ್ಧಾರ ಸ್ವಾಗತಾರ್ಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆಅವರು ಮಾತನಾಡಿದರು.</p>.<p>ಸಾಮಾನ್ಯ ಕಾರ್ಯಕರ್ತರೂರಾಜ್ಯಸಭೆಗೆ ಆಯ್ಕೆಯಾಗಬಹುದು ಎಂಬ ಸಂದೇಶ ವರಿಷ್ಟರುನೀಡಿದ್ದಾರೆ. ಇಂತಹ ನಿರ್ಧಾರಬಿಜೆಪಿಯಲ್ಲಿ ಮಾತ್ರ ಸಾಧ್ಯ. ಅಶೋಕ್ ಗಸ್ತಿ, ಈರಣ್ಣ ಕಡಾಡಿಅವರು 40 ವರ್ಷಗಳಿಂದಪಕ್ಷಕ್ಕೆಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ವರಿಷ್ಠರುಗುರುತಿಸಿದ್ದಾರೆ. ಈ ಆಯ್ಕೆ ಪಕ್ಷದ ಕಾರ್ಯಕರ್ತರಿಗೂ ಸಂತಸ ತಂದಿದೆ. ಸಣ್ಣ ಸಣ್ಣ ಜಾತಿಗಳಿಗೂಬಿಜಿಪಿ ಆದ್ಯತೆ ನೀಡುತ್ತದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.</p>.<p>ಪಕ್ಷದ ರಾಜ್ಯ ಚುನಾವಣಾಸಮಿತಿ ಕಳಿಸಿದ ಪಟ್ಟಿಯಲ್ಲಿ ಈ ಇಬ್ಬರ ಹೆಸರು ಇರಲ್ಲಿಲ್ಲ. ಆದರೆ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಕಳಿಸಿದ ಪಟ್ಟಿಯಲ್ಲಿ ಇಬ್ಬರ ಹೆಸರು ಇತ್ತು. ಅನಿರೀಕ್ಷಿತ ಆಯ್ಕೆ ಕಾರಣಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>