<p><strong>ಶಿವಮೊಗ್ಗ:</strong> ‘ಕೆಲವು ವಿಚಾರಗಳ ಬಗ್ಗೆ ಬಿಜೆಪಿಯ ಹಿರಿಯ ನಾಯಕರ ಜತೆ ಚರ್ಚಿಸಬೇಕಿದೆ. ಬಳಿಕ ಪಕ್ಷ ಸೇರುವ ಬಗ್ಗೆ ಚಿಂತಿಸಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. </p>.<p>‘ಕಾಂಗ್ರೆಸ್ ಸೇರ್ಪಡೆಗೊಳ್ಳುವಂತೆ ಅನೇಕರು ಒತ್ತಾಯಿಸಿದ್ದಾರೆ. ಉನ್ನತ ಸ್ಥಾನ ನೀಡುವುದಾಗಿ ಪುಸಲಾಯಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ಶ್ರಮಿಸಿದ್ದೇನೆ. ಸಾಧ್ಯವಾದರೆ ಇಲ್ಲಿಯೇ ಮುಂದುವರಿಯಲು ಬಯಸುತ್ತೇನೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. </p>.<p>‘ಬಿಜೆಪಿ ಸೇರುವಂತೆ ಕುರುಬ ಸಮುದಾಯದ ನಾಯಕರು ಪ್ರೀತಿಯಿಂದ ಹೇಳುತ್ತಿದ್ದಾರೆ. ಸೆಪ್ಟೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಕ್ರಾಂತಿಯಾಗುತ್ತದೆ ಎಂದು ಹೇಳಲಾಗುತ್ತಿದೆ. ಸರ್ಕಾರವೇ ಬೀಳುತ್ತದೆಯೋ ಅಥವಾ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಇಳಿಯುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು. </p>.<p>‘ಸಂವಿಧಾನದ ಮೂಲ ಪೀಠಿಕೆಯಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಎಂಬ ಎರಡು ಪದಗಳನ್ನು ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರದ ಅವಧಿಯಲ್ಲಿ ಸೇರಿಸಿದ್ದಾರೆ. ಈ ಪದಗಳು ತುರ್ತು ಪರಿಸ್ಥಿತಿಯಲ್ಲಿ ತುರುಕಿದ ಪದಗಳಾಗಿವೆ. ಆದರೆ, ಕಾಂಗ್ರೆಸ್ಸಿಗರು ಇದನ್ನು ಮರೆತು ಈಗ ಸಂವಿಧಾನ ವಿರೋಧಿ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. </p>.<p>‘ಜಾತ್ಯತೀತ, ಸಮಾಜವಾದಿ ಪದಗಳನ್ನು ಸೇರಿಸುವ ವಿಷಯದಲ್ಲಿ ಸಂವಿಧಾನ ರಚನಾ ಸಭೆಯಲ್ಲಿಯೇ ಅಂಬೇಡ್ಕರ್ ಮತ್ತು ನೆಹರೂ ಅವರು ವಿರೋಧ ಮಾಡಿದ್ದರು. ಆದರೆ, ಇಂದಿರಾಗಾಂಧಿಯವರು ಅದನ್ನು ಸೇರಿಸಿ, ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದರು. ಹೀಗಾಗಿ ಈ ಎರಡೂ ಪದಗಳ ಮಧ್ಯೆ ಸಮಗ್ರವಾಗಿ ಚರ್ಚೆ ನಡೆದು, ಪ್ರಜಾಪ್ರಭುತ್ವಕ್ಕೆ ಅನುಗುಣವಾದ ತೀರ್ಮಾನ ಈಗಲಾದರೂ ಆಗಬೇಕು’ ಎಂದರು.</p>.<p>ಪ್ರಮುಖರಾದ ವಾಗೀಶ್, ಲೋಕೇಶ್, ಬಾಲು, ಸೋಗಾನೆ ರಮೇಶ್, ಜಾಧವ, ರಾಜು, ಶಿವಕುಮಾರ್, ಕುಬೇರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಕೆಲವು ವಿಚಾರಗಳ ಬಗ್ಗೆ ಬಿಜೆಪಿಯ ಹಿರಿಯ ನಾಯಕರ ಜತೆ ಚರ್ಚಿಸಬೇಕಿದೆ. ಬಳಿಕ ಪಕ್ಷ ಸೇರುವ ಬಗ್ಗೆ ಚಿಂತಿಸಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. </p>.<p>‘ಕಾಂಗ್ರೆಸ್ ಸೇರ್ಪಡೆಗೊಳ್ಳುವಂತೆ ಅನೇಕರು ಒತ್ತಾಯಿಸಿದ್ದಾರೆ. ಉನ್ನತ ಸ್ಥಾನ ನೀಡುವುದಾಗಿ ಪುಸಲಾಯಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ಶ್ರಮಿಸಿದ್ದೇನೆ. ಸಾಧ್ಯವಾದರೆ ಇಲ್ಲಿಯೇ ಮುಂದುವರಿಯಲು ಬಯಸುತ್ತೇನೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. </p>.<p>‘ಬಿಜೆಪಿ ಸೇರುವಂತೆ ಕುರುಬ ಸಮುದಾಯದ ನಾಯಕರು ಪ್ರೀತಿಯಿಂದ ಹೇಳುತ್ತಿದ್ದಾರೆ. ಸೆಪ್ಟೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಕ್ರಾಂತಿಯಾಗುತ್ತದೆ ಎಂದು ಹೇಳಲಾಗುತ್ತಿದೆ. ಸರ್ಕಾರವೇ ಬೀಳುತ್ತದೆಯೋ ಅಥವಾ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಇಳಿಯುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು. </p>.<p>‘ಸಂವಿಧಾನದ ಮೂಲ ಪೀಠಿಕೆಯಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಎಂಬ ಎರಡು ಪದಗಳನ್ನು ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರದ ಅವಧಿಯಲ್ಲಿ ಸೇರಿಸಿದ್ದಾರೆ. ಈ ಪದಗಳು ತುರ್ತು ಪರಿಸ್ಥಿತಿಯಲ್ಲಿ ತುರುಕಿದ ಪದಗಳಾಗಿವೆ. ಆದರೆ, ಕಾಂಗ್ರೆಸ್ಸಿಗರು ಇದನ್ನು ಮರೆತು ಈಗ ಸಂವಿಧಾನ ವಿರೋಧಿ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. </p>.<p>‘ಜಾತ್ಯತೀತ, ಸಮಾಜವಾದಿ ಪದಗಳನ್ನು ಸೇರಿಸುವ ವಿಷಯದಲ್ಲಿ ಸಂವಿಧಾನ ರಚನಾ ಸಭೆಯಲ್ಲಿಯೇ ಅಂಬೇಡ್ಕರ್ ಮತ್ತು ನೆಹರೂ ಅವರು ವಿರೋಧ ಮಾಡಿದ್ದರು. ಆದರೆ, ಇಂದಿರಾಗಾಂಧಿಯವರು ಅದನ್ನು ಸೇರಿಸಿ, ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದರು. ಹೀಗಾಗಿ ಈ ಎರಡೂ ಪದಗಳ ಮಧ್ಯೆ ಸಮಗ್ರವಾಗಿ ಚರ್ಚೆ ನಡೆದು, ಪ್ರಜಾಪ್ರಭುತ್ವಕ್ಕೆ ಅನುಗುಣವಾದ ತೀರ್ಮಾನ ಈಗಲಾದರೂ ಆಗಬೇಕು’ ಎಂದರು.</p>.<p>ಪ್ರಮುಖರಾದ ವಾಗೀಶ್, ಲೋಕೇಶ್, ಬಾಲು, ಸೋಗಾನೆ ರಮೇಶ್, ಜಾಧವ, ರಾಜು, ಶಿವಕುಮಾರ್, ಕುಬೇರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>