<p><strong>ಶಿವಮೊಗ್ಗ: </strong>ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ತೇಲಿ ಬಿಡುತ್ತಿದ್ದಾರೆ.ಇವರು ಯಾರೂಮುಖ್ಯಮಂತ್ರಿಯಾಗುವುದಿಲ್ಲ. ಅದು ಭ್ರಮೆ ಎಂದು ಸಚಿವ ಕೆ.ಎಸ್.ಈಶ್ವರಪ್ಪಕುಟುಕಿದರು.</p>.<p>ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಉಪ ಚುನಾವಣೆಯ ಪ್ರಚಾರ ಮುಗಿದಿದೆ. ಬಿಜೆಪಿ ಎಲ್ಲ 15 ಸ್ಥಾನಗಳಲ್ಲೂಗೆಲುವು ಸಾಧಿಸಲಿದೆ.8 ಸ್ಥಾನಗಳು ಗೆದ್ದರೂ ಸಾಕುಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಬಿ.ಎಸ್.ಯಡಿಯೂರಪ್ಪಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.</p>.<p>ಕಾಂಗ್ರೆಸ್ ಮುಖಂಡರೇಗೊಂದಲದಹೇಳಿಕೆ ನೀಡುತ್ತಿದ್ದಾರೆ. ಈ ಎರಡೂ ಪಕ್ಷಗಳದು ಈಗ ಮುಗಿದ ಕಥೆ.ಚುನಾವಣೆ ಫಲಿತಾಂಶದ ದಿನವೇ ಈ ಎರಡು ಪಕ್ಷಗಳ ಭವಿಷ್ಯನಿರ್ಧಾರವಾಗುತ್ತದೆ. ಅವರ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳುವುದೇ ಅನುಮಾನ ಎಂದು ಛೇಡಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ತಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.ಬಿಜೆಪಿಶಾಸಕರ ಮುಟ್ಟುವ ಧೈರ್ಯ ಅವರಿಗೆ ಇಲ್ಲ. ಮೊದಲುಅವರ ಶಾಸಕರನ್ನೇಹಿಡಿದಿಟ್ಟುಕೊಳ್ಳಲಿ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ತೇಲಿ ಬಿಡುತ್ತಿದ್ದಾರೆ.ಇವರು ಯಾರೂಮುಖ್ಯಮಂತ್ರಿಯಾಗುವುದಿಲ್ಲ. ಅದು ಭ್ರಮೆ ಎಂದು ಸಚಿವ ಕೆ.ಎಸ್.ಈಶ್ವರಪ್ಪಕುಟುಕಿದರು.</p>.<p>ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಉಪ ಚುನಾವಣೆಯ ಪ್ರಚಾರ ಮುಗಿದಿದೆ. ಬಿಜೆಪಿ ಎಲ್ಲ 15 ಸ್ಥಾನಗಳಲ್ಲೂಗೆಲುವು ಸಾಧಿಸಲಿದೆ.8 ಸ್ಥಾನಗಳು ಗೆದ್ದರೂ ಸಾಕುಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಬಿ.ಎಸ್.ಯಡಿಯೂರಪ್ಪಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.</p>.<p>ಕಾಂಗ್ರೆಸ್ ಮುಖಂಡರೇಗೊಂದಲದಹೇಳಿಕೆ ನೀಡುತ್ತಿದ್ದಾರೆ. ಈ ಎರಡೂ ಪಕ್ಷಗಳದು ಈಗ ಮುಗಿದ ಕಥೆ.ಚುನಾವಣೆ ಫಲಿತಾಂಶದ ದಿನವೇ ಈ ಎರಡು ಪಕ್ಷಗಳ ಭವಿಷ್ಯನಿರ್ಧಾರವಾಗುತ್ತದೆ. ಅವರ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳುವುದೇ ಅನುಮಾನ ಎಂದು ಛೇಡಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷದಿನೇಶ್ ಗುಂಡೂರಾವ್ ಅವರು ಬಿಜೆಪಿ ಶಾಸಕರು ತಮ್ಮ ಪಕ್ಷಕ್ಕೆ ಬರುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.ಬಿಜೆಪಿಶಾಸಕರ ಮುಟ್ಟುವ ಧೈರ್ಯ ಅವರಿಗೆ ಇಲ್ಲ. ಮೊದಲುಅವರ ಶಾಸಕರನ್ನೇಹಿಡಿದಿಟ್ಟುಕೊಳ್ಳಲಿ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>