ಜಿಲ್ಲೆಯಲ್ಲಿ ಆಮ್ಲಜನಕ, ವೆಂಟಿಲೇಟರ್, ಔಷಧಗಳು, ಹಾಸಿಗೆ ಸೇರಿದಂತೆ ಯಾವುದೇ ಕೊರತೆ ಇಲ್ಲ. ಜನರು ಆತಂಕಪಡುವ ಆವಶ್ಯಕತೆ ಇಲ್ಲ. ಮನೆಯಲ್ಲೇ ಇದ್ದು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನಸ್ಪಂದನೆ ಇಲ್ಲದೆ ಯಾವ ನಿರ್ಧಾರಗಳೂ ಪರಿಣಾಮಕಾರಿ ಆಗುವುದಿಲ್ಲ. ಸಂಕಷ್ಟಕ್ಕೆ ಒಳಗಾದ ಬಡವರಿಗೆ ಆರ್ಥಿಕ ನೆರವು ನೀಡಲು ಪ್ರಯತ್ನಿಸಲಾಗುವುದು ಎಂದರು.