ಶಿವಮೊಗ್ಗ: ‘ಕೋಲಾರ ಕ್ಷೇತ್ರದಲ್ಲಿ ಪರಿಶಿಷ್ಟರ ಮತಗಳು ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅಲ್ಲಿ ಸ್ಪರ್ಧಿಸುವುದಿಲ್ಲ. ಒಂದೊಮ್ಮೆ ಅಲ್ಲಿಂದಲೇ ಸ್ಪರ್ಧಿಸಿದಲ್ಲಿ, ಅವರದ್ದೇ ಪಕ್ಷದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಹಾಗೂ ಕೆ.ಎಚ್. ಮುನಿಯಪ್ಪ ಒಂದಾಗಿ ಸೋಲಿಸಲಿದ್ದಾರೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.