ರಸ್ತೆ ವಿಸ್ತರಣೆಗೆ ಆಗ್ರಹ: ‘ಕಾಸ್ಪಾಡಿಯ ಈ ತಿರುವಿನಲ್ಲಿ ಬಹಳಷ್ಟು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಅದಕ್ಕೆ ಪ್ರಮುಖ ಕಾರಣ ಹೆಚ್ಚಿನ ತಿರುವು ಇರುವುದು ಹಾಗೂ ಸರಿಯಾದ ತಡೆಗೋಡೆ ಇಲ್ಲದಿರುವುದು. ಜೆತೆಗೆ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿಗಳು ಎತ್ತರಕ್ಕೆ ಬೆಳೆದಿದ್ದು, ಎದುರಿಗೆ ಬರುವ ವಾಹನಗಳು ಕಾಣಿಸುವುದಿಲ್ಲ. ಅವುಗಳ ತೆರವಿಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ’ ಎಂದು ಸ್ಥಳೀಯರು ಆರೋಪಿಸುತ್ತಾರೆ.