<p><strong>ಶಿವಮೊಗ್ಗ: </strong>ಸರ್ಕಾರಿ ನೌಕರರೆಂದು ಪರಿಗಣಿಸಲು ಅಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಶುಕ್ರವಾರ ಮುಷ್ಕರ ನಡೆಸಿದರು. ಕೆಲವು ಮಾರ್ಗಗಳಲ್ಲಿ ಬಸ್ಸೇವೆ ಎಂದಿನಂತೆ ಮುಂದುವರಿದಿತ್ತು. ಕೆಲವು ಮಾರ್ಗಗಳಲ್ಲಿ ವ್ಯತ್ಯಯವಾಗಿತ್ತು.</p>.<p>ಶಿವಮೊಗ್ಗ ಡಿಪೊದಿಂದ ಹೊರಡುವ 45 ಬಸ್ಗಳ ಸಂಚಾರ ನಿತ್ಯದಂತೆ ಇತ್ತು. ಬೇರೆ ಡಿಪೊಗಳಿಂದ ಬರಬೇಕಿದ್ದ ಮತ್ತು ಹೊರಡಬೇಕಿದ್ದ ಬಸ್ಗಳ ಸಂಖ್ಯೆ ವಿರಳವಾಗಿತ್ತು. ಕೆಲವು ಮಾರ್ಗಗಳಲ್ಲಿ ಬಸ್ ಸಂಚಾರ ವಿಳಂಬವಾಗಿ ಪ್ರಯಾಣಿಕರು ಪರದಾಡಿದರು. ಬದಲಿ ವಾಹನಗಳನ್ನು ಆಶ್ರಯಿಸಿದರು.</p>.<p>ಶಿವಮೊಗ್ಗ ಭದ್ರಾವತಿ ಮಧ್ಯೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಮಾಚೇನಹಳ್ಳಿ ಬಳಿ ಕೆಲವು ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದರು. ಇದರಿಂದ ಬಸ್ನ ಗಾಜುಗಳು ಒಡೆದವು. ಬಸ್ ನಿರ್ವಾಹಕ ಮತ್ತು ಚಾಲಕರು ಕೆಲ ಸಮಯ ಬಸ್ ಸಂಚಾರ ಸ್ಥಗಿತಗೊಳಿಸಿದರು. ಇದರಿಂದ ಪ್ರಯಾಣಿಕರು ಪರದಾಡಿದರು.</p>.<p>ಬಸ್ನಿಲ್ದಾಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಸಿಪಿಐ ರಾಘವೇಂದ್ರ ಕಾಂಡಿಕೆ,ತುಂಗಾ ನಗರ ಪಿಎಸ್ಐ ತಿರುಮೇಶ್ ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸರ್ಕಾರಿ ನೌಕರರೆಂದು ಪರಿಗಣಿಸಲು ಅಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಶುಕ್ರವಾರ ಮುಷ್ಕರ ನಡೆಸಿದರು. ಕೆಲವು ಮಾರ್ಗಗಳಲ್ಲಿ ಬಸ್ಸೇವೆ ಎಂದಿನಂತೆ ಮುಂದುವರಿದಿತ್ತು. ಕೆಲವು ಮಾರ್ಗಗಳಲ್ಲಿ ವ್ಯತ್ಯಯವಾಗಿತ್ತು.</p>.<p>ಶಿವಮೊಗ್ಗ ಡಿಪೊದಿಂದ ಹೊರಡುವ 45 ಬಸ್ಗಳ ಸಂಚಾರ ನಿತ್ಯದಂತೆ ಇತ್ತು. ಬೇರೆ ಡಿಪೊಗಳಿಂದ ಬರಬೇಕಿದ್ದ ಮತ್ತು ಹೊರಡಬೇಕಿದ್ದ ಬಸ್ಗಳ ಸಂಖ್ಯೆ ವಿರಳವಾಗಿತ್ತು. ಕೆಲವು ಮಾರ್ಗಗಳಲ್ಲಿ ಬಸ್ ಸಂಚಾರ ವಿಳಂಬವಾಗಿ ಪ್ರಯಾಣಿಕರು ಪರದಾಡಿದರು. ಬದಲಿ ವಾಹನಗಳನ್ನು ಆಶ್ರಯಿಸಿದರು.</p>.<p>ಶಿವಮೊಗ್ಗ ಭದ್ರಾವತಿ ಮಧ್ಯೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಮಾಚೇನಹಳ್ಳಿ ಬಳಿ ಕೆಲವು ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದರು. ಇದರಿಂದ ಬಸ್ನ ಗಾಜುಗಳು ಒಡೆದವು. ಬಸ್ ನಿರ್ವಾಹಕ ಮತ್ತು ಚಾಲಕರು ಕೆಲ ಸಮಯ ಬಸ್ ಸಂಚಾರ ಸ್ಥಗಿತಗೊಳಿಸಿದರು. ಇದರಿಂದ ಪ್ರಯಾಣಿಕರು ಪರದಾಡಿದರು.</p>.<p>ಬಸ್ನಿಲ್ದಾಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಸಿಪಿಐ ರಾಘವೇಂದ್ರ ಕಾಂಡಿಕೆ,ತುಂಗಾ ನಗರ ಪಿಎಸ್ಐ ತಿರುಮೇಶ್ ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>