<p><strong>ಸಾಗರ:</strong> ರಾಜ್ಯದ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿರುವ ಕೆಲವರು ಇಂತಹದ್ದೇ ಖಾತೆ ಬೇಕೆಂದು ಪಟ್ಟುಹಿಡಿದಿರುವ ಕ್ರಮ ಸರಿಯಲ್ಲ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.</p>.<p>ತಾಲ್ಲೂಕಿನ ಅರೆಹದ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವರ ಖಾತೆಯಲ್ಲಿ ದೊಡ್ಡದು, ಸಣ್ಣದು ಎಂಬ ಭಾವನೆ ಇರಬಾರದು. ನಾನು ಸಣ್ಣ ನೀರಾವರಿ ಸಚಿವನಾಗಿದ್ದಾಗ ಕೆಲವರು ಇದು ಮಹತ್ವವಿಲ್ಲದ ಖಾತೆ. ಅದನ್ನು ಯಾಕೆ ಒಪ್ಪಿಕೊಂಡಿರಿ ಎಂದು ಕೇಳಿದ್ದರು. ಈಗ ಈ ಖಾತೆಯೇ ಮಹತ್ವದ್ದಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಈ ಹಿಂದೆ ಬಸವಲಿಂಗಪ್ಪ ಅವರಿಗೆ ಶಿಕ್ಷೆಯ ರೂಪದಲ್ಲಿ ಪರಿಸರ ಖಾತೆಯನ್ನು ನೀಡಲಾಯಿತು. ಅವರು ಈ ಖಾತೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುವ ಮೂಲಕ ಖಾತೆಯ ಪ್ರಾಮುಖ್ಯವನ್ನು ಮನದಟ್ಟು ಮಾಡಿದರು. ಹೀಗೆ ಸಚಿವರಾದವರು ತಮಗೆ ದೊರೆತ ಇಲಾಖೆಯಲ್ಲಿ ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು ಎನ್ನುವ ಬಗ್ಗೆ ಯೋಚಿಸಬೇಕೇ ಹೊರತು ಕೊಟ್ಟ ಖಾತೆಯ ಕುರಿತು ಅಸಮಾಧಾನ ಸೂಚಿಸಬಾರದು’ ಎಂದು<br />ಹೇಳಿದರು.</p>.<p>‘ಶಿವಮೊಗ್ಗ ಜಿಲ್ಲೆಯ ಇಬ್ಬರು ಹಿರಿಯರಿಗೆ ಸಚಿವ ಸ್ಥಾನ ನೀಡಿದ್ದರಿಂದ ನನಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ಯಾವುದೇ ಬೇಸರವಿಲ್ಲ. ಪಕ್ಷದ ಹಿರಿಯರ ತೀರ್ಮಾನವನ್ನು ನಾನು ಗೌರವಿಸುತ್ತೇನೆ. ಮುಂದಿನ 20 ತಿಂಗಳೊಳಗೆ ವಿಧಾನಸಭೆ ಚುನಾವಣೆ ಬರಲಿರುವುದರಿಂದ ಅಲ್ಲಿಯವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸುಭದ್ರವಾಗಿರುವಂತೆ ನೋಡಿಕೊಳ್ಳುವುದು ಶಾಸಕರಾದ ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ರಾಜ್ಯದ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿರುವ ಕೆಲವರು ಇಂತಹದ್ದೇ ಖಾತೆ ಬೇಕೆಂದು ಪಟ್ಟುಹಿಡಿದಿರುವ ಕ್ರಮ ಸರಿಯಲ್ಲ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.</p>.<p>ತಾಲ್ಲೂಕಿನ ಅರೆಹದ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವರ ಖಾತೆಯಲ್ಲಿ ದೊಡ್ಡದು, ಸಣ್ಣದು ಎಂಬ ಭಾವನೆ ಇರಬಾರದು. ನಾನು ಸಣ್ಣ ನೀರಾವರಿ ಸಚಿವನಾಗಿದ್ದಾಗ ಕೆಲವರು ಇದು ಮಹತ್ವವಿಲ್ಲದ ಖಾತೆ. ಅದನ್ನು ಯಾಕೆ ಒಪ್ಪಿಕೊಂಡಿರಿ ಎಂದು ಕೇಳಿದ್ದರು. ಈಗ ಈ ಖಾತೆಯೇ ಮಹತ್ವದ್ದಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಈ ಹಿಂದೆ ಬಸವಲಿಂಗಪ್ಪ ಅವರಿಗೆ ಶಿಕ್ಷೆಯ ರೂಪದಲ್ಲಿ ಪರಿಸರ ಖಾತೆಯನ್ನು ನೀಡಲಾಯಿತು. ಅವರು ಈ ಖಾತೆಯನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುವ ಮೂಲಕ ಖಾತೆಯ ಪ್ರಾಮುಖ್ಯವನ್ನು ಮನದಟ್ಟು ಮಾಡಿದರು. ಹೀಗೆ ಸಚಿವರಾದವರು ತಮಗೆ ದೊರೆತ ಇಲಾಖೆಯಲ್ಲಿ ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು ಎನ್ನುವ ಬಗ್ಗೆ ಯೋಚಿಸಬೇಕೇ ಹೊರತು ಕೊಟ್ಟ ಖಾತೆಯ ಕುರಿತು ಅಸಮಾಧಾನ ಸೂಚಿಸಬಾರದು’ ಎಂದು<br />ಹೇಳಿದರು.</p>.<p>‘ಶಿವಮೊಗ್ಗ ಜಿಲ್ಲೆಯ ಇಬ್ಬರು ಹಿರಿಯರಿಗೆ ಸಚಿವ ಸ್ಥಾನ ನೀಡಿದ್ದರಿಂದ ನನಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ಯಾವುದೇ ಬೇಸರವಿಲ್ಲ. ಪಕ್ಷದ ಹಿರಿಯರ ತೀರ್ಮಾನವನ್ನು ನಾನು ಗೌರವಿಸುತ್ತೇನೆ. ಮುಂದಿನ 20 ತಿಂಗಳೊಳಗೆ ವಿಧಾನಸಭೆ ಚುನಾವಣೆ ಬರಲಿರುವುದರಿಂದ ಅಲ್ಲಿಯವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸುಭದ್ರವಾಗಿರುವಂತೆ ನೋಡಿಕೊಳ್ಳುವುದು ಶಾಸಕರಾದ ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>