‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಕುಟುಂಬದ ವಿಚಾರಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸಲು ಇವರಿಗೆ ಯಾವ ನೈತಿಕತೆ ಇದೆ. ತಂದೆ–ತಾಯಿ ಕಳೆದುಕೊಂಡಾಗ ನಾನು ಅನುಭವಿಸಿರುವ ವೇದನೆ ಇವರಿಗೇನು ಗೊತ್ತು? ಮತಗಳಿಕೆಗಾಗಿ ಬಂಗಾರಪ್ಪ ಹೆಸರು ಪ್ರಸ್ತಾಪಿಸುವ ಇವರು ಕೆಆರ್ಎಸ್ ನೀರಿನ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದ ಅವರ ಹೆಸರು ಮಂಡ್ಯ, ರಾಮನಗರದಲ್ಲಿ ಏಕೆ ಹೇಳುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.