<p><strong>ಶಿವಮೊಗ್ಗ</strong>: ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆದ 10 ತಿಂಗಳಲ್ಲಿ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರ ಉಳಿದಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಕ್ಷದ ವೇದಿಕೆ ಏರಿದರು.</p><p>ಕುಮಾರ್ ಬಂಗಾರಪ್ಪ ಬರುತ್ತಿದ್ದಂತೆಯೇ ನೆರೆದವರು ಚಪ್ಪಾಳೆ, ಶಿಳ್ಳೆ, ಕೇಕೆ ಹಾಕಿ ಸ್ವಾಗತಿಸಿದರು. ಮಾಜಿ ಶಾಸಕರಿಗೆ ಮೀಸಲಿದ್ದ ಎರಡನೇ ಸಾಲಿನಲ್ಲಿ ಕುಳಿತ ಕುಮಾರ್ ಬಂಗಾರಪ್ಪ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಕರೆತಂದು ಮುಂದಿನ ಸಾಲಿನಲ್ಲಿ ಕೂರಿಸಿದರು.</p><p>ಕುಮಾರ್ ಬಂಗಾರಪ್ಪ ಬಿಜೆಪಿ ಬಿಡಲಿದ್ದಾರೆ. ಕಾಂಗ್ರೆಸ್ ಸೇರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಗೀತಾ ಶಿವರಾಜ ಕುಮಾರ್ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಆ ವದಂತಿಗೆ ತೆರೆಬಿದ್ದಿತ್ತು. ಕುಮಾರ್ ಅವರನ್ನು ಉತ್ತರ ಕನ್ನಡದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆದ 10 ತಿಂಗಳಲ್ಲಿ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರ ಉಳಿದಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಕ್ಷದ ವೇದಿಕೆ ಏರಿದರು.</p><p>ಕುಮಾರ್ ಬಂಗಾರಪ್ಪ ಬರುತ್ತಿದ್ದಂತೆಯೇ ನೆರೆದವರು ಚಪ್ಪಾಳೆ, ಶಿಳ್ಳೆ, ಕೇಕೆ ಹಾಕಿ ಸ್ವಾಗತಿಸಿದರು. ಮಾಜಿ ಶಾಸಕರಿಗೆ ಮೀಸಲಿದ್ದ ಎರಡನೇ ಸಾಲಿನಲ್ಲಿ ಕುಳಿತ ಕುಮಾರ್ ಬಂಗಾರಪ್ಪ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಕರೆತಂದು ಮುಂದಿನ ಸಾಲಿನಲ್ಲಿ ಕೂರಿಸಿದರು.</p><p>ಕುಮಾರ್ ಬಂಗಾರಪ್ಪ ಬಿಜೆಪಿ ಬಿಡಲಿದ್ದಾರೆ. ಕಾಂಗ್ರೆಸ್ ಸೇರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಗೀತಾ ಶಿವರಾಜ ಕುಮಾರ್ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಆ ವದಂತಿಗೆ ತೆರೆಬಿದ್ದಿತ್ತು. ಕುಮಾರ್ ಅವರನ್ನು ಉತ್ತರ ಕನ್ನಡದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>