‘ಕವಿಮನೆ, ಹೇಮಾಂಗಣ, ಸುತ್ತಲಿನ ಪ್ರದೇಶದ ದುರಸ್ತಿ ಕಾಮಗಾರಿಗೆ ರಾಜ್ಯ ಸರ್ಕಾರ ನೀಡಿರುವ ಅನುದಾನ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಕಾಡು ಕಡಿದು ಕಾಂಕ್ರೀಟ್ ಕಾಡು ನಿರ್ಮಾಣಕ್ಕೆ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಮುಂದಾಗಿದೆ. ಇಲ್ಲಿಗೆ ಬರುವವರು ಕ್ಷಣಿಕ ವೈಭೋಗದಲ್ಲಿ ತಲ್ಲೀನರಾಗುವ ಆತಂಕ ಎದುರಾಗಿದೆ’ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಾರೆ.