<p>ಶಿವಮೊಗ್ಗ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಕುರುಬರ ಮೇಲೆ ಕಳಕಳಿ ಇದ್ದರೆ ಸಮಾಜವನ್ನು ಪರಿಶಿಷ್ಟ ಪಂಗಡಗಳ (ಎಸ್.ಟಿ) ಪಟ್ಟಿಗೆ ಸೇರಿಸಿ ಅಲ್ಲಿನ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.</p>.<p>ಈಗಿರುವ ಎಸ್.ಟಿ. ಮೀಸಲಾತಿಯನ್ನು ಶೇ 20ರಷ್ಟು ಹೆಚ್ಚಿಸಿ ಅದರಲ್ಲಿ ಕುರುಬ ಸಮಾಜಕ್ಕೆ ಹಾಗೂ ಇನ್ನಿತರೆ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಒದಗಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>‘ಕುರುಬರಿಗೆ ಎಸ್.ಟಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಿದ್ದು ನಾನಲ್ಲ. ಕೆ.ಎಸ್.ಈಶ್ವರಪ್ಪ ಅವರ ಹೋರಾಟದಿಂದ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸತ್ಯ ಅರಿತು ಮಾತನಾಡಿದ್ದಕ್ಕೆ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದರು. </p>.<p>ಕುರುಬ ಸಮಾಜವನ್ನು ಎಸ್.ಸಿ ವರ್ಗಕ್ಕೆ ಸೇರಿಸಬೇಕೆಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಸಿದ ಹೋರಾಟದ ಫಲವಾಗಿ ತಜ್ಞರ ಸಮಿತಿಯು ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ಹೇಳಿದರು. </p>.<p>ಅಧ್ಯಯನದಲ್ಲಿ ಕುರುಬ ಸಮಾಜ ಈ ದೇಶದ ಮೂಲ ನಿವಾಸಿಗಳೆಂದು, ಇವರಲ್ಲಿ ಹಲವರು ಕಡು ಬಡವರು, ತುಳಿತಕ್ಕೊಳಗಾದ ಜನರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಕುರುಬ ಸಮಾಜ ಅತ್ಯಂತ ಹಿಂದುಳಿದ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ ಎಂದು ವಿವರಿಸಿದರು.</p>.<p>‘ನಮ್ಮ ಹೋರಾಟ ಯಾವುದೇ ಒಂದು ಜಾತಿಯ ವಿರುದ್ಧವಾಗಲಿ, ಸಮಾಜದ ವಿರುದ್ಧವಾಗಲಿ ಅಲ್ಲ. ಹಿಂದೂ ಸಮಾಜದ ಕಡು ಬಡವನಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟ ಮುಂದುವರೆಯುತ್ತದೆ’ ಎಂದರು. </p>.<p>ಮಹಾಲಿಂಗಯ್ಯ ಶಾಸ್ತ್ರಿ, ಇ.ವಿಶ್ವಾಸ್, ಉಮೇಶ್ ಆರಾಧ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಕುರುಬರ ಮೇಲೆ ಕಳಕಳಿ ಇದ್ದರೆ ಸಮಾಜವನ್ನು ಪರಿಶಿಷ್ಟ ಪಂಗಡಗಳ (ಎಸ್.ಟಿ) ಪಟ್ಟಿಗೆ ಸೇರಿಸಿ ಅಲ್ಲಿನ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.</p>.<p>ಈಗಿರುವ ಎಸ್.ಟಿ. ಮೀಸಲಾತಿಯನ್ನು ಶೇ 20ರಷ್ಟು ಹೆಚ್ಚಿಸಿ ಅದರಲ್ಲಿ ಕುರುಬ ಸಮಾಜಕ್ಕೆ ಹಾಗೂ ಇನ್ನಿತರೆ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಒದಗಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>‘ಕುರುಬರಿಗೆ ಎಸ್.ಟಿ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಿದ್ದು ನಾನಲ್ಲ. ಕೆ.ಎಸ್.ಈಶ್ವರಪ್ಪ ಅವರ ಹೋರಾಟದಿಂದ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸತ್ಯ ಅರಿತು ಮಾತನಾಡಿದ್ದಕ್ಕೆ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದರು. </p>.<p>ಕುರುಬ ಸಮಾಜವನ್ನು ಎಸ್.ಸಿ ವರ್ಗಕ್ಕೆ ಸೇರಿಸಬೇಕೆಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಸಿದ ಹೋರಾಟದ ಫಲವಾಗಿ ತಜ್ಞರ ಸಮಿತಿಯು ಕುಲಶಾಸ್ತ್ರೀಯ ಅಧ್ಯಯನ ಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ಹೇಳಿದರು. </p>.<p>ಅಧ್ಯಯನದಲ್ಲಿ ಕುರುಬ ಸಮಾಜ ಈ ದೇಶದ ಮೂಲ ನಿವಾಸಿಗಳೆಂದು, ಇವರಲ್ಲಿ ಹಲವರು ಕಡು ಬಡವರು, ತುಳಿತಕ್ಕೊಳಗಾದ ಜನರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಕುರುಬ ಸಮಾಜ ಅತ್ಯಂತ ಹಿಂದುಳಿದ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ ಎಂದು ವಿವರಿಸಿದರು.</p>.<p>‘ನಮ್ಮ ಹೋರಾಟ ಯಾವುದೇ ಒಂದು ಜಾತಿಯ ವಿರುದ್ಧವಾಗಲಿ, ಸಮಾಜದ ವಿರುದ್ಧವಾಗಲಿ ಅಲ್ಲ. ಹಿಂದೂ ಸಮಾಜದ ಕಡು ಬಡವನಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟ ಮುಂದುವರೆಯುತ್ತದೆ’ ಎಂದರು. </p>.<p>ಮಹಾಲಿಂಗಯ್ಯ ಶಾಸ್ತ್ರಿ, ಇ.ವಿಶ್ವಾಸ್, ಉಮೇಶ್ ಆರಾಧ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>