ಒಡಿಶಾದ ಸಂಬಲ್ಪುರ್ ಜಿಲ್ಲೆಯ ಬಟಲಗಾ ಹಳ್ಳಿಯಲ್ಲಿ 1944ರಲ್ಲಿ ಜನಿಸಿದ್ದ ಅವರು 1956–57ರಲ್ಲಿ ಹಿರಾಕುಡ್ ಜಲಾಶಯಕ್ಕಾಗಿ ನೆಲೆ ಕಳೆದುಕೊಂಡಿದ್ದ 285 ಹಳ್ಳಿಗಳ 22 ಸಾವಿರ ಕುಟುಂಬಗಳಲ್ಲಿ ಪಂಡಾ ಅವರ ಕುಟುಂಬವು ಒಂದು. ನಿವೃತ್ತ ಐಎಎಸ್ ಅಧಿಕಾರಿ ಪಂಡಾ ಅವರು ಸಾಹಿತ್ಯ ಕ್ಷೇತ್ರದಲ್ಲೂ ಸಾಕಷ್ಟು ಕೃಷಿ ಮಾಡಿದ್ದಾರೆ. 16 ಕವನ ಸಂಕಲನ, ಒಂದು ಕಾದಂಬರಿ ಪ್ರಕಟಿಸಿದ್ದಾರೆ. 1985ರಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಗಂಗಾಧರ್ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾಗಿದ್ದರು.