ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ರಾಜ್ಯಪಾಲರ ಭಾಷಣದ ವೇಳೆ ಕುಲಪತಿ ವಿರುದ್ಧ ಧಿಕ್ಕಾರದ ಕೂಗು

ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ
Published 22 ಜುಲೈ 2023, 6:08 IST
Last Updated 22 ಜುಲೈ 2023, 6:08 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹಲೋತ್ ಅವರ ಭಾಷಣದ ವೇಳೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಕೆಲವರು ಘೋಷಣೆ ಕೂಗಿದರು.

ಸಭಾಂಗಣದ ಬಾಲ್ಕನಿಯಲ್ಲಿ ಕುಳಿತಿದ್ದ ಕೆಲವರು ರಾಜ್ಯಪಾಲರು ಭಾಷಣ ಮಾಡುವಾಗಲೇ ಘೋಷಣೆ ಕೂಗಲು ಆರಂಭಿಸಿದರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿ ಧಿಕ್ಕಾರ ಕೂಗಿದರು. ಕಪ್ಪು ಬಾವುಟ ಪ್ರದರ್ಶಿಸಿದರು. ಗದ್ದಲದ ನಡುವೆಯೇ ರಾಜ್ಯಪಾಲರು ಭಾಷಣ ಮುಂದುವರೆಸಿದರು. ಸಭಾಂಗಣ ಪ್ರವೇಶಿಸಿದ ಪೊಲೀಸರು ಘೋಷಣೆ ಕೂಗುವವರನ್ನು ಸಭಾಂಗಣದಿಂದ ಹೊರಗೆ ಕರೆತಂದು ವಾಹನದಲ್ಲಿ ಕರೆದೊಯ್ದರು.

ಭಾಷಣದಲ್ಲಿ ಈ ವಿಚಾರ ಪ್ರಸ್ತಾಪಿಸಿದ ರಾಜ್ಯಪಾಲರು, 'ಘೋಷಣೆ ಕೂಗಿದ ಗುಂಪಿನ ನಾಲ್ವರು ಬಂದು ನಂತರ ನನ್ನನ್ನು ಭೇಟಿಯಾಗಲಿ. ಅವರ ಸಮಸ್ಯೆ ಆಲಿಸುವೆ. ಏನಾದರೂ ತೊಂದರೆ ಆಗಿದ್ದರೆ ಪರಿಹರಿಸುವೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT