ವಿದೇಶದ 25 ವಿಶ್ವವಿದ್ಯಾಲಯ ಗಳೊಂದಿಗೆ ಸಂಶೋಧನಾ ಒಪ್ಪಂದ ಗಳನ್ನು ಮಾಡಿಕೊಳ್ಳಲಾಗಿದೆ. ಈ ಮೂಲಕ ಅಧ್ಯಾಪಕರಿಗೆ ಸಂಶೋಧನೆ ಯನ್ನು ತೀವ್ರಗೊಳಿಸಲು ಕೋರಲಾಗಿದೆ. ವಚನಕಾರ್ತಿ ಅಕ್ಕಮಹಾದೇವಿ, ಅಲ್ಲಮಪ್ರಭು, ಡಾ.ರಾಜ್ಕುಮಾರ್ ಸೇರಿ ಹಲವು ಮಹನೀಯರ ಅಧ್ಯಯನ ಪೀಠಗಳನ್ನು ಆರಂಭಿಸಿ ಅವರ ಕೊಡುಗೆ, ಚಿಂತನೆಗಳ ಕುರಿತ ಸಂಶೋಧನೆಗಳನ್ನು ಕೈಗೊಳ್ಳಲು ಉತ್ತೇಜಿಸಲಾಗಿದೆ ಎಂದು ಮಾಹಿತಿ ನೀಡಿದರು.