<p><strong>ಸಾಗರ</strong>: ನಗರ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕ್ರೀಡಾಂಗಣ ಎಂದರೆ ಅದು ಊರಿನ ಹೊರಭಾಗದಲ್ಲಿರುತ್ತದೆ. ಆದರೆ, ಸಾಗರದ ಕ್ರೀಡಾಪಟುಗಳ ಹಾಗೂ ಕ್ರೀಡಾ ಪ್ರೇಮಿಗಳ ಸುದೈವ ಎನ್ನುವಂತೆ ಇಲ್ಲಿನ ಗೋಪಾಲಗೌಡ ಕ್ರೀಡಾಂಗಣ ನಗರದ ಹೃದಯ ಭಾಗದಲ್ಲೇ ಇದೆ. ಆದರೆ, ಸೂಕ್ತ ನಿರ್ವಹಣೆ ಕೊರತೆಯಿಂದ ಬಳಲುತ್ತಿದೆ.</p>.<p>90ರ ದಶಕದ ಆರಂಭದಲ್ಲಿ ಇಲ್ಲಿನ ಆರ್.ಪಿ. ರಸ್ತೆಯ ತರಕಾರಿ ಮಾರುಕಟ್ಟೆಯ ಹಿಂಭಾಗದಲ್ಲಿ ಭತ್ತ ಬೆಳೆಯುವ ಗದ್ದೆ ಇತ್ತು. ಸುಮಾರು 5 ಎಕರೆಗೂ ಹೆಚ್ಚಿನ ಈ ಪ್ರದೇಶವನ್ನು ಈ ಕೃಷಿಭೂಮಿಯ ಮಾಲೀಕರ ವಿರೋಧದ ನಡುವೆಯೂ ಅಂದಿನ ಪುರಪಿತೃರು ದೂರದೃಷ್ಟಿಯಿಂದ ಕ್ರೀಡಾಂಗಣದ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಮೂಲಕ ವಶಪಡಿಸಿಕೊಂಡಿದ್ದರು.</p>.<p>70ರ ದಶಕದಲ್ಲೇ ಸಣ್ಣ ತಾಲ್ಲೂಕು ಕೇಂದ್ರವಾದರೂ ಇಲ್ಲಿ ರಾಷ್ಟ್ರಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಯಲು ಕಾರಣರಾದ ಪುರಸಭೆಯ ಅಧ್ಯಕ್ಷರಾಗಿದ್ದ ಬಿ.ಎಸ್. ಚಂದ್ರಶೇಖರ್ ಸೇರಿ ಹಲವರ ಪ್ರಬಲ ಇಚ್ಛಾಶಕ್ತಿಯಿಂದ 1994ರಲ್ಲಿ ಗೋಪಾಲಗೌಡ ಕ್ರೀಡಾಂಗಣ ಆರಂಭವಾಯಿತು.</p>.<p>2008ನೇ ಸಾಲಿನಲ್ಲಿ ಅಂದಿನ ನಗರಸಭೆ ಅತ್ಯಂತ ಮಹತ್ವಾಕಾಂಕ್ಷೆಯಿಂದ ಈ ಕ್ರೀಡಾಂಗಣದಲ್ಲಿ ಟರ್ಫ್ ಅಂಕಣವನ್ನು ನಿರ್ಮಿಸಿದ್ದು, ಕ್ರಿಕೆಟ್ ಆಟಗಾರರ ಹಾಗೂ ಅಭಿಮಾನಿಗಳ ಉತ್ಸಾಹ ಹೆಚ್ಚಲು ಕಾರಣವಾಗಿತ್ತು. ಟರ್ಫ್ ಅಂಕಣದ ಉದ್ಘಾಟನೆಗೆ ಬಂದಿದ್ದ ಹಿರಿಯ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ‘ರಾಜ್ಯದ ಅತ್ಯುತ್ತಮ ಟರ್ಫ್ ಅಂಕಣಗಳಲ್ಲಿ ಇದೂ ಕೂಡ ಒಂದು’ ಎಂದು ಶ್ಲಾಘಿಸಿದ್ದರು.</p>.<p>ನಂತರದ ಹಲವು ವರ್ಷ ಈ ಕ್ರೀಡಾಂಗಣದಲ್ಲಿ ಅನೇಕ ಮಹತ್ವದ ಪಂದ್ಯಾವಳಿಗಳು ನಡೆದಿವೆ. ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಯುವ ಕ್ರಿಕೆಟಿಗರು ಇಲ್ಲಿ ತಾಲೀಮು ನಡೆಸುತ್ತಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯದ ಲೀಗ್ ಕ್ರಿಕೆಟ್ ಪಂದ್ಯಾವಳಿಗಳು ಇಲ್ಲಿ ನಿಯಮಿತವಾಗಿ ನಡೆಯುತ್ತಿವೆ.</p>.<p>ಆದರೆ, ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಂಗಣದ ನಿರ್ವಹಣೆಯ ಬಗ್ಗೆ ಅದರ ಜವಾಬ್ದಾರಿ ಹೊತ್ತಿರುವ ನಗರಸಭೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಆಸಕ್ತಿ ಇಲ್ಲದಂತಾಗಿದೆ.</p>.<p>ಕಳೆದ ನವೆಂಬರ್ 13ರಂದು ನಗರದಲ್ಲಿ ಭಾರಿ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ಕ್ರೀಡಾಂಗಣದ ಪೆವಿಲಿಯನ್ನ ಚಾವಣಿಯ ಶೀಟ್ಗಳು ಹಾರಿ ಹೋಗಿವೆ. ಘಟನೆ ನಡೆದ ಮರುದಿನವೇ ಸ್ಥಳಕ್ಕೆ ಬಂದ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಶೀಟ್ಗಳನ್ನು ಅಳವಡಿಸುವುದಾಗಿ ನೀಡಿದ್ದ ಭರವಸೆ ನಾಲ್ಕು ತಿಂಗಳು ಕಳೆದರೂ ಈಡೇರಿಲ್ಲ.</p>.<p>ಕ್ರೀಡಾಂಗಣದ ಸುತ್ತಲೂ ಅಳವಡಿಸಿರುವ ಬೇಲಿ ಶಿಥಿಲಗೊಂಡಿದ್ದು, ಅಲ್ಲಲ್ಲಿ ಗೇಟ್ಗಳು ಮುರಿದು ಬಿದ್ದಿವೆ. ಈ ಕಾರಣ ರಾತ್ರಿ ವೇಳೆ ಮದ್ಯಪಾನ ಮಾಡುವವರಿಗೆ ಕ್ರೀಡಾಂಗಣ ಒಂದು ‘ಅಡ್ಡೆ’ಯಾಗಿ ಮಾರ್ಪಾಟಾಗಿದೆ.</p>.<p>ಊರಿನ ಕ್ರೀಡಾ ಕ್ಷೇತ್ರದ ಹೆಮ್ಮೆಯ ಪ್ರತೀಕದಂತಿರುವ ಈ ಕ್ರೀಡಾಂಗಣದ ನಿರ್ವಹಣೆ ಸೂಕ್ತವಾಗಿದ್ದರೆ ಮಾತ್ರ ಅದನ್ನು ಸುಸ್ಥಿತಿಯಲ್ಲಿಡಲು ಸಾಧ್ಯ. ಇಲ್ಲದಿದ್ದರೆ ಶೀಘ್ರ ಅದು ತನ್ನ ಹಿಂದಿನ ವೈಭವ, ಮೆರುಗನ್ನು ಕಳೆದುಕೊಳ್ಳುವ ಅಪಾಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ನಗರ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕ್ರೀಡಾಂಗಣ ಎಂದರೆ ಅದು ಊರಿನ ಹೊರಭಾಗದಲ್ಲಿರುತ್ತದೆ. ಆದರೆ, ಸಾಗರದ ಕ್ರೀಡಾಪಟುಗಳ ಹಾಗೂ ಕ್ರೀಡಾ ಪ್ರೇಮಿಗಳ ಸುದೈವ ಎನ್ನುವಂತೆ ಇಲ್ಲಿನ ಗೋಪಾಲಗೌಡ ಕ್ರೀಡಾಂಗಣ ನಗರದ ಹೃದಯ ಭಾಗದಲ್ಲೇ ಇದೆ. ಆದರೆ, ಸೂಕ್ತ ನಿರ್ವಹಣೆ ಕೊರತೆಯಿಂದ ಬಳಲುತ್ತಿದೆ.</p>.<p>90ರ ದಶಕದ ಆರಂಭದಲ್ಲಿ ಇಲ್ಲಿನ ಆರ್.ಪಿ. ರಸ್ತೆಯ ತರಕಾರಿ ಮಾರುಕಟ್ಟೆಯ ಹಿಂಭಾಗದಲ್ಲಿ ಭತ್ತ ಬೆಳೆಯುವ ಗದ್ದೆ ಇತ್ತು. ಸುಮಾರು 5 ಎಕರೆಗೂ ಹೆಚ್ಚಿನ ಈ ಪ್ರದೇಶವನ್ನು ಈ ಕೃಷಿಭೂಮಿಯ ಮಾಲೀಕರ ವಿರೋಧದ ನಡುವೆಯೂ ಅಂದಿನ ಪುರಪಿತೃರು ದೂರದೃಷ್ಟಿಯಿಂದ ಕ್ರೀಡಾಂಗಣದ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಮೂಲಕ ವಶಪಡಿಸಿಕೊಂಡಿದ್ದರು.</p>.<p>70ರ ದಶಕದಲ್ಲೇ ಸಣ್ಣ ತಾಲ್ಲೂಕು ಕೇಂದ್ರವಾದರೂ ಇಲ್ಲಿ ರಾಷ್ಟ್ರಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಯಲು ಕಾರಣರಾದ ಪುರಸಭೆಯ ಅಧ್ಯಕ್ಷರಾಗಿದ್ದ ಬಿ.ಎಸ್. ಚಂದ್ರಶೇಖರ್ ಸೇರಿ ಹಲವರ ಪ್ರಬಲ ಇಚ್ಛಾಶಕ್ತಿಯಿಂದ 1994ರಲ್ಲಿ ಗೋಪಾಲಗೌಡ ಕ್ರೀಡಾಂಗಣ ಆರಂಭವಾಯಿತು.</p>.<p>2008ನೇ ಸಾಲಿನಲ್ಲಿ ಅಂದಿನ ನಗರಸಭೆ ಅತ್ಯಂತ ಮಹತ್ವಾಕಾಂಕ್ಷೆಯಿಂದ ಈ ಕ್ರೀಡಾಂಗಣದಲ್ಲಿ ಟರ್ಫ್ ಅಂಕಣವನ್ನು ನಿರ್ಮಿಸಿದ್ದು, ಕ್ರಿಕೆಟ್ ಆಟಗಾರರ ಹಾಗೂ ಅಭಿಮಾನಿಗಳ ಉತ್ಸಾಹ ಹೆಚ್ಚಲು ಕಾರಣವಾಗಿತ್ತು. ಟರ್ಫ್ ಅಂಕಣದ ಉದ್ಘಾಟನೆಗೆ ಬಂದಿದ್ದ ಹಿರಿಯ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ‘ರಾಜ್ಯದ ಅತ್ಯುತ್ತಮ ಟರ್ಫ್ ಅಂಕಣಗಳಲ್ಲಿ ಇದೂ ಕೂಡ ಒಂದು’ ಎಂದು ಶ್ಲಾಘಿಸಿದ್ದರು.</p>.<p>ನಂತರದ ಹಲವು ವರ್ಷ ಈ ಕ್ರೀಡಾಂಗಣದಲ್ಲಿ ಅನೇಕ ಮಹತ್ವದ ಪಂದ್ಯಾವಳಿಗಳು ನಡೆದಿವೆ. ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಯುವ ಕ್ರಿಕೆಟಿಗರು ಇಲ್ಲಿ ತಾಲೀಮು ನಡೆಸುತ್ತಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯದ ಲೀಗ್ ಕ್ರಿಕೆಟ್ ಪಂದ್ಯಾವಳಿಗಳು ಇಲ್ಲಿ ನಿಯಮಿತವಾಗಿ ನಡೆಯುತ್ತಿವೆ.</p>.<p>ಆದರೆ, ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಂಗಣದ ನಿರ್ವಹಣೆಯ ಬಗ್ಗೆ ಅದರ ಜವಾಬ್ದಾರಿ ಹೊತ್ತಿರುವ ನಗರಸಭೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಆಸಕ್ತಿ ಇಲ್ಲದಂತಾಗಿದೆ.</p>.<p>ಕಳೆದ ನವೆಂಬರ್ 13ರಂದು ನಗರದಲ್ಲಿ ಭಾರಿ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ಕ್ರೀಡಾಂಗಣದ ಪೆವಿಲಿಯನ್ನ ಚಾವಣಿಯ ಶೀಟ್ಗಳು ಹಾರಿ ಹೋಗಿವೆ. ಘಟನೆ ನಡೆದ ಮರುದಿನವೇ ಸ್ಥಳಕ್ಕೆ ಬಂದ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಶೀಟ್ಗಳನ್ನು ಅಳವಡಿಸುವುದಾಗಿ ನೀಡಿದ್ದ ಭರವಸೆ ನಾಲ್ಕು ತಿಂಗಳು ಕಳೆದರೂ ಈಡೇರಿಲ್ಲ.</p>.<p>ಕ್ರೀಡಾಂಗಣದ ಸುತ್ತಲೂ ಅಳವಡಿಸಿರುವ ಬೇಲಿ ಶಿಥಿಲಗೊಂಡಿದ್ದು, ಅಲ್ಲಲ್ಲಿ ಗೇಟ್ಗಳು ಮುರಿದು ಬಿದ್ದಿವೆ. ಈ ಕಾರಣ ರಾತ್ರಿ ವೇಳೆ ಮದ್ಯಪಾನ ಮಾಡುವವರಿಗೆ ಕ್ರೀಡಾಂಗಣ ಒಂದು ‘ಅಡ್ಡೆ’ಯಾಗಿ ಮಾರ್ಪಾಟಾಗಿದೆ.</p>.<p>ಊರಿನ ಕ್ರೀಡಾ ಕ್ಷೇತ್ರದ ಹೆಮ್ಮೆಯ ಪ್ರತೀಕದಂತಿರುವ ಈ ಕ್ರೀಡಾಂಗಣದ ನಿರ್ವಹಣೆ ಸೂಕ್ತವಾಗಿದ್ದರೆ ಮಾತ್ರ ಅದನ್ನು ಸುಸ್ಥಿತಿಯಲ್ಲಿಡಲು ಸಾಧ್ಯ. ಇಲ್ಲದಿದ್ದರೆ ಶೀಘ್ರ ಅದು ತನ್ನ ಹಿಂದಿನ ವೈಭವ, ಮೆರುಗನ್ನು ಕಳೆದುಕೊಳ್ಳುವ ಅಪಾಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>